ಸೆಪ್ಟೆಂಬರ್ 6 ರಾಜ್ಯದ ಸರ್ಕಾರಿ ನೌಕರರಿಗೆ ಮಹತ್ವದ ದಿನ ಸಾಧನೆ ಮಾಡಿದ ರಾಜ್ಯದ 30 ಅಧಿಕಾರಿ ಗಳಿಗೆ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ಪ್ರಧಾನ…..

Suddi Sante Desk

ಬೆಂಗಳೂರು –

ಸೆಪ್ಟೆಂಬರ್ 6ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರ ಣೆಯನ್ನು ಆಯೋಜಿಸಲಾಗಿದೆ.ಪ್ರಥಮ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮದ ಜೊತೆಗೆ ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಇದೇ ಸಂದರ್ಭ ದಲ್ಲಿ 2022 ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರು ಪ್ರಕಟಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋ ಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿರುವ ಈ ಎರಡೂ ಕಾರ್ಯಕ್ರಮಗಳನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.ಈಗಾಗಲೇ ಆಯ್ಕೆಯಾಗಿರುವ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಜ್ಯ ಸಚಿವ ಸಂಪುಟದ ಸದಸ್ಯರು,ಸಂಸದರು, ಶಾಸಕರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಒಳಗೊಂಡಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.ಇನ್ನೂ ಇದೆಲ್ಲಾ ಒಂದು ವಿಚಾರವಾದರೆ ಈ ಒಂದು ಕಾರ್ಯಕ್ರಮ ದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯದ ಮುಖ್ಯಮಂತ್ರಿ ಕೇಂದ್ರ ಸರ್ಕಾರದ ಮಾದರಿಯ ವೇತನ ಮತ್ತು ಕ್ಯಾಶ್ ಲೇಸ್ ಚಿಕಿತ್ಸೆ ಯೋಜನೆ ಸೇರಿದಂತೆ ಯಾವ ಯಾವ ಯೋಜನೆ ಗಳನ್ನು ಘೋಷಣೆ ಮಾಡತಾರೆ ಎಂಬ ಬೆಟ್ಟದಷ್ಟು ನಿರೀಕ್ಷೆಯಲ್ಲಿ ರಾಜ್ಯದ ಸರ್ಕಾರಿ ನೌಕರರು ಇದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.