ಸಚಿವ ಉಮೇಶ್ ಕತ್ತಿ ನಿಧನ ಹೃದಯಾಘಾತದಿಂದ ನಿಧನರಾದ ಸಚಿವರು….‌.

Suddi Sante Desk

ಬೆಂಗಳೂರು –

ಸಚಿವ ಉಮೇಶ್ ಕತ್ತಿ ನಿಧನರಾಗಿದ್ದಾರೆ ಹೌದು ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ರಾತ್ರಿ ಹತ್ತು ಗಂಟೆಗೆ ಎದೆನೋವು ಕಾಣಿಸಿಕೊಂಡ ನಂತರ ಕೂಡಲೇ ಅವರನ್ನು ಎಮ್ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಯಿತು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಗೆ ಸ್ಪಂದಿಸದೆ ಸಚಿವ ಉಮೇಶ್ ಕತ್ತಿ ನಿಧನರಾದರು

ಒಂದು ಗಂಟೆಗೂ ಹೆಚ್ಚಿನ ಪ್ರಮಾಣದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಚಿಕಿತ್ಸೆ ಗೆ ಸ್ಪಂದಿಸದೇ ಉಮೇಶ್ ಕತ್ತಿ ಯವರು ನಿಧನರಾದರು.ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸಂಜೆ ಕುಸಿದು ಬಿದ್ದು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.