ಹೊರಬಿತ್ತು ದಸರಾ ರಜೆಯ ಆದೇಶ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವರ ಸೂಚನೆ…..

Suddi Sante Desk

ಬೆಂಗಳೂರು –

ನವರಾತ್ರಿ ಆಚರಣೆಯ ಸಲುವಾಗಿ ಸೆ. 26 ರಿಂದ ಅ.10ರವರೆಗೆ ಶಾಲಾ ಮಕ್ಕಳಿಗೆ ರಜೆ ನೀಡಲು ಮಂಗಳೂರು ಜಿಲ್ಲಾಧಿಕಾರಿಗೆ ನಿರ್ದೇಶಿಸಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಸೆ.26ರಿಂದ ನವರಾತ್ರಿ ಹಬ್ಬ ಪ್ರಾರಂಭವಾಗುತ್ತಿದೆ. ಮಂಗಳೂರು ದಸರಾ,ಶತಮಾನೋತ್ಸವದ ಸಂಭ್ರಮಾಚ ರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗ ಳಾದೇವಿ ದೇವಸ್ಥಾನ ಸಹಿತ ನಗರದೆಲ್ಲೆಡೆ ಅತ್ಯಂತ ಸಂಭ್ರಮದಲ್ಲಿ ದಸರ ಹಬ್ಬವನ್ನು ಆಚರಿಸಲಾಗುತ್ತದೆ.

ಶಾಲಾ ಮಕ್ಕಳ ರಜೆಯನ್ನು ಹಬ್ಬದ ಸಂದರ್ಭದಲ್ಲೇ ನೀಡುವಂತೆ ಮನವಿ ಮಾಡಿದ್ದು ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ.ಅ.2ರ ಗಾಂಧಿ ಜಯಂತಿಯ ಆಚರಣೆ ಮಾಡುವ ಷರತ್ತಿನೊಂದಿಗೆ ರಜೆ ನೀಡಲು ಸೂಚಿಸಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇತ್ತ ಈ ಒಂದು ವಿಚಾರ ಕುರಿತು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.