ಮಾನವೀಯತೆ ಮೆರೆದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ – ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಗೆ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಶಿಪ್ಟ್ ಮಾಡಿದ ಸಚಿವರು

Suddi Sante Desk

ಅಪಘಾತದಲ್ಲಿ ಗಾಯಗೊಂಡು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆಯನ್ನು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮೆರೆದಿದ್ದಾರೆ.ಹೌದು ಸಚಿವರು ಹೊರಟಿದ್ದ ಸಮಯದಲ್ಲಿ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ರಸ್ತೆ ಪಕ್ಕದಲ್ಲಿಯೇ ಬಿದ್ದಿದ್ದರು ಇದನ್ನು ನೋಡಿದ ಸಚಿವರು ಕೂಡಲೇ ಕಾರನ್ನು ನಿಲ್ಲಿಸಿ ತಮ್ಮ ಬೆಂಗಾವಲ ವಾಹನದಲ್ಲಿಯೇ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದಾರೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಇದರೊಂದಿಗೆ ಮಾನವೀಯತೆ ಮೆರೆದಿದ್ದಾರೆ ಸಚಿವರು

ಧಾರವಾಡ ಜಿಲ್ಲೆಯ ನವಲಗುಂದ ಬಳಿಯ ಖನ್ನೂರು ಬಳಿ ಅಪಘಾತ ನಡೆದಿತ್ತು ಅದೇ ರಸ್ತೆ ಮಾರ್ಗವಾಗಿ ಹೊರಟಿದ್ದ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಅವರು ಅಪಘಾತ ವಾಗಿದ್ದ ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿ ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ರವಾನೆ ಮಾಡಿದರು.ದ್ವಿಚಕ್ರ ವಾಹನದಲ್ಲಿ ಹೊರಟಾಗ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಇದರೊಂದಿಗೆ ರಾಜಕೀಯ ನಾಯಕರಿಗೆ ಸಾಮಾಜಿಕ ಜವಾಬ್ದಾರಿ ಏನು ಎಂಬೊದನ್ನು ಈ ಮೂಲಕ ತೋರಿಸಿಕೊಟ್ಟಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.