ನುಡಿ ಜಾತ್ರೆ ಗೆ ಮುಹೂರ್ತ ನಿಗದಿ ಜನವರಿ6 ರಿಂದ ಹಾವೇರಿ ಯಲ್ಲಿ ಮೂರು ದಿನಗಳ ಕಾಲ ನಡೆಯಲಿದೆ ಸಾಹಿತ್ಯ ಸಮ್ಮೇಳನ

Suddi Sante Desk
ನುಡಿ ಜಾತ್ರೆ ಗೆ ಮುಹೂರ್ತ ನಿಗದಿ ಜನವರಿ6 ರಿಂದ ಹಾವೇರಿ ಯಲ್ಲಿ ಮೂರು ದಿನಗಳ ಕಾಲ ನಡೆಯಲಿದೆ ಸಾಹಿತ್ಯ ಸಮ್ಮೇಳನ

ಹಾವೇರಿ –

ಹೌದು ಈ ಬಾರಿ ಹಾವೇರಿಯಲ್ಲಿ ಜನೆವರಿ 6 ರಿಂದ ಅರ್ಥಪೂರ್ಣ ವಾಗಿ ವಿಭಿನ್ನವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ರಾಜ್ಯ ಸರ್ಕಾರ 20 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.ಹಾವೇರಿ ಯಲ್ಲಿ ಮಾತನಾಡಿದ ಅವರು ಅರ್ಥಪೂರ್ಣವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸರ್ಕಾರದ ಅನುದಾನಕ್ಕೆ ಯಾವುದೇ ಕೊರತೆ ಗಳು ಆಗುವುದಿಲ್ಲ ಸಿಎಂ ಬೊಮ್ಮಾಯಿ 20 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ದ್ದಾರೆ, ಈ ಕಾರ್ಯಕ್ರಮಕ್ಕೆ ಮತ್ತು ಇದರ ಪೂರ್ವ ತಯಾರಿಯ ಬಗ್ಗೆ ಚರ್ಚಿಸುವಂತೆ ಇದಕ್ಕೆ ಬೇಕಾದ ಕಾಮಗಾರಿ ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸ ಲಾಗಿದೆಅಚ್ಚುಕಟ್ಟಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಮೂರು ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಡೆಸಲು ನಿರ್ಧರಿಸ ಲಾಗಿದೆ.ಒಂದು ಪ್ರಧಾನ ವೇದಿಕೆ ಎರಡು ಉಪ ವೇದಿಕೆಗಳು ನಿರ್ಮಾಣ ಮಾಡುವಂತೆ ಅಧಿಕಾರಿ ಗಳಿಗೆ ಹೇಳಲಾಗಿದೆ ಜನವರಿ 6ರಂದು ಅದ್ದೂರಿ ಮೆರವಣಿಗೆ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು

ಇನ್ನೂ ಐದು ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕ ರನ್ನು ಬಳಸಿಕೊಂಡು ಅಚ್ಚುಕಟ್ಟಾಗಿ ಸಮ್ಮೇಳನ ನಡೆಸಲಾಗುತ್ತದೆ ಇದಕ್ಕಾಗಿ ಸರ್ಕಾರ ಬಜೆಟ್ ನಲ್ಲಿ 20 ಕೋಟಿ ಮೀಸಲಿಟ್ಟಿತ್ತು ಅಂತೆಯೇ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 2023ರ ಜನವರಿ 6, 7 ಮತ್ತು 8ರಂದು ನಡೆಸುವ ಕುರಿತು ನಿರ್ಧರಿಸಲಾ ಗಿದೆ.ಈ ರವರೆಗೆ ನಾನಾ ಕಾರಣಗಳಿಂದ ಅನೇಕ ಬಾರಿ ಮುಂದೂಡಲಾಗಿದ್ದು

ಈ ದಿನಾಂಕಗಳು ನಿಶ್ಚಿತವಾಗಿದ್ದು ಮತ್ತೆ ಬದಲಾ ವಣೆ ಇಲ್ಲವೆಂಬ ತೀರ್ಮಾನವನ್ನು ಇತ್ತೀಚೆಗೆ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.