ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾದ ರಾಜ್ಯ ಸರ್ಕಾರ – ಇಂದು ಸಂಜೆಯೊಳಗಾಗಿ ಹೊರ ಬೀಳಲಿದೆ ಬಹು ನಿರೀಕ್ಷಿತ 7ನೇ ವೇತನ ಆಯೋಗದ ರಚನೆಯ ಆದೇಶ

Suddi Sante Desk
ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾದ ರಾಜ್ಯ ಸರ್ಕಾರ – ಇಂದು ಸಂಜೆಯೊಳಗಾಗಿ ಹೊರ ಬೀಳಲಿದೆ ಬಹು ನಿರೀಕ್ಷಿತ 7ನೇ ವೇತನ ಆಯೋಗದ ರಚನೆಯ ಆದೇಶ

ಬೆಂಗಳೂರು

ರಾಜ್ಯದ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿರುವ ಸರ್ಕಾರ ನೌಕರರ ಬೇಡಿಕೆಗೆ ಅಸ್ತು ಎಂದಿದ್ದು ಬಹುನಿರೀಕ್ಷಿತ 7ನೇ ವೇತನ ಆಯೋಗ ರಚನೆಯನ್ನು ಮಾಡಿ ಇವತ್ತು ಸಂಜೆಯೊಳಗಾಗಿ ಆದೇಶವನ್ನು ಹೊರಡಿಸುವ ಸಾಧ್ಯತೆ ಇದೆ

ಇದರೊಂದಿಗೆ ಶೇಕಡ 40ರಷ್ಟು ವೇತನ ಹೆಚ್ಚಳ ನಿರೀಕ್ಷೆಯಲ್ಲಿ ರಾಜ್ಯದ ಸರ್ಕಾರಿ ನೌಕರರಿದ್ದಾರೆ. ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಆಯೋಗ ರಚನೆಗೆ ಸಂಬಂಧಿಸಿ ದಂತೆ ಈಗಾಗಲೇ ಸಭೆ ನಡೆಸಿ ಷಡಾಕ್ಷರಿ ಅವರ ಸಮ್ಮುಖದಲ್ಲಿಯೇ ಅದಕ್ಕೆ ಪೈನಲ್ ಟಚ್ ನೀಡಿದ್ದಾರೆ

ಇಂದು ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.ಮೊದಲ ಬಾರಿಗೆ 5 ವರ್ಷದೊಳಗೆ ಹೊಸ ವೇತನ ಆಯೋಗ ರಚನೆ ಮಾಡಲು ಸರ್ಕಾರ ಮುಂದಾಗಿದೆ. ಆಯೋಗದ ಶಿಫಾರಸಿನಿಂದ 13.5 ಲಕ್ಷ ಹಾಲಿ ಮತ್ತು ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ.ವೇತನ ಏರಿಕೆ ಯಿಂದ ಸರ್ಕಾರಕ್ಕೆ ವಾರ್ಷಿಕ 12,500 ಕೋಟಿ ರೂಪಾಯಿ ಹೊರೆಯಾಗಲಿದ್ದು ಇದರೊಂದಿಗೆ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿರುವ ಸರ್ಕಾರ ನೌಕರರ ಬೇಡಿಕೆಗೆ ಅಸ್ತು ಎನ್ನುವ ಸಾಧ್ಯತೆ ಇದೆ. ಇವತ್ತು ಬಹುನಿರೀಕ್ಷಿತ 7ನೇ ವೇತನ ಆಯೋಗ ರಚನೆಯಾಗುವ ಸಾಧ್ಯತೆಯಿದ್ದು, ಶೇಕಡ 40ರಷ್ಟು ವೇತನ ಹೆಚ್ಚಳ ನಿರೀಕ್ಷೆಯಲ್ಲಿ ನೌಕರರಿದ್ದಾರೆ.ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಆಯೋಗ ರಚನೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದಾರೆ.

ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಮೊದಲ ಬಾರಿಗೆ 5 ವರ್ಷದೊಳಗೆ ಹೊಸ ವೇತನ ಆಯೋಗ ರಚನೆ ಮಾಡಲು ಸರ್ಕಾರ ಮುಂದಾಗಿದೆ. ಆಯೋಗದ ಶಿಫಾರಸಿನಿಂದ 13.5 ಲಕ್ಷ ಹಾಲಿ ಮತ್ತು ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ. ವೇತನ ಏರಿಕೆಯಿಂದ ಸರ್ಕಾರಕ್ಕೆ ವಾರ್ಷಿಕ 12,500 ಕೋಟಿ ರೂ. ಹೊರೆಯಾಗಬಹುದು ಎಂದು ಹೇಳಲಾಗಿದೆ.

 

ವರದಿ – ಶ್ರೀಗೌರಿ ಸುದ್ದಿ ಸಂತೆ ನ್ಯೂಸ್

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.