This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

State News

ಸರ್ಕಾರಿ ಶಾಲೆಯ ಶಿಕ್ಷಕ ಸೇರಿ ಐವರ ಬಂಧನ – ಬಂಧನದ ಹಿಂದಿನ ಕಾರಣ ಕೇಳಿದರೆ ಶಾಕ್ ಆಗತೀರಾ…..

WhatsApp Group Join Now
Telegram Group Join Now

ಬಳ್ಳಾರಿ –

ಮನೆ ಕಳ್ಳತನ ಪ್ರಕರಣದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕ ಸೇರಿದಂತೆ ಐದು ಜನರನ್ನು ಬಂಧನ ಮಾಡಿ ರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ‌.ಹೌದು ಜಿಲ್ಲೆ ಯ ಕೊಟ್ಟೂರು ತಾಲೂಕಿನ ಬಸವೇಶ್ವರ ಬಡಾವಣೆ ಯ ಉದ್ಯಮಿ ಮಲ್ಲೇಶಪ್ಪ ಅವರ ಮನೆಯಲ್ಲಿ ನಡೆ ದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿ ದ್ದಾರೆ.

ಪ್ರಕರಣದಲ್ಲಿ ಭಾಗಿಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಸೇರಿದಂತೆ ಒಟ್ಟು ಐದು ಜನರನ್ನು ಪೊಲೀಸರು ಬಂಧನ ಮಾಡಿದ್ದಾರೆ.ಉದ್ಯಮಿ ಮಲ್ಲೇಶ್ ಅವರ ಮನೆಯ ಲ್ಲಿ ಏ.11ರಂದು ಹತ್ತು ಜನರ ತಂಡ ರಾತ್ರಿ ಏಕಾಏಕಿ ನುಗ್ಗಿ ಮನೆಯಲ್ಲಿ ಇದ್ದ ಗಂಡ ಹೆಂಡತಿಯನ್ನು ಹೆದರಿ ಸಿ ಮನೆಯಲ್ಲಿದ್ದ 30 ಲಕ್ಷ ರೂ.ನಗದು ದೋಚಿ ಪರಾರಿಯಾಗಿದ್ದರು.ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.ಪ್ರಕರಣದ ಪ್ರಮುಖ ಆರೋ ಪಿ ಎಂದು ಹೇಳಲಾಗುತ್ತಿದ್ದ ಜಿ.ಎಸ್.ಜೀವನ್ ಪತ್ತೆ ಗಾಗಿ ನಿರಂತರ ಹುಡುಕಾಟ ನಡೆಸಿದ್ದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಸ್ಥಳೀಯರು ಭಾಗಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾನೆ.ಪ್ರಕರಣದಲ್ಲಿ ಭಾಗಿಯಾದ ಭದ್ರಾವತಿ ಯ ಜಿ.ಎಸ್.ಜೀವನ್, ಬಡಲಡುಕು ಗ್ರಾಮದ ಪಿ.ಶ್ರೀನಿವಾಸ, ಚಪ್ಪರದಹಳ್ಳಿಯ ಕೆ.ಬಸವರಾಜ, ಕೊಟ್ಟೂರಿನ ಯಲ್ಲೋಜಿರಾವ್, ಹಾಗೂ ರಾಂಪುರ ಗ್ರಾಮದ ಎ.ರಾಮಚಂದ್ರಪ್ಪ ಆರೋಪಿಗಳನ್ನು ಹಿಡಿಯುವಲ್ಲಿ ಕೊಟ್ಟೂರು ಪೊಲೀಸರು ಯಶಸ್ವಿ ಯಾಗಿದ್ದಾರೆ.ದರೋಡೆಯಾದ 30 ಲಕ್ಷ ರೂ.ಗಳ ಪೈಕಿ ಆರೋಪಿಗಳಿಂದ ಒಟ್ಟು 12.47 ಲಕ್ಷ ರೂ. ನಗದು,ಇನೋವಾ, ಓಮಿನಿ, ಇಂಡಿಕಾ ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk