ಜೈಲು ಸೇರಿದ ಭ್ರಷ್ಟ BEO – ಹಣವನ್ನು ತಗೆದುಕೊಳ್ಳುವಾಗ ರೆಡ್ ಹ್ಯಾಂಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಜಯಣ್ಣ

Suddi Sante Desk
ಜೈಲು ಸೇರಿದ ಭ್ರಷ್ಟ BEO – ಹಣವನ್ನು ತಗೆದುಕೊಳ್ಳುವಾಗ ರೆಡ್ ಹ್ಯಾಂಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಜಯಣ್ಣ

ಚಿಕ್ಕಮಗಳೂರು

 

ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಇಒ ಜೈಲು ಸೇರಿದ್ದಾರೆ ಹೌದು ಶಿಕ್ಷಕರೊಬ್ಬರನ್ನು ಬೇರೊಂದು ಶಾಲೆಗೆ ನಿಯೋಜನೆ ಮಾಡಲು 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾ ಯುಕ್ತ ಬಲೆಗೆ ಬಿದ್ದಿದ್ದ ಬಿಇಒ ಜೈಲು ಸೇರಿದ್ದಾರೆ

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಬಿಇಒ ಕೆ ಎನ್ ಜಯಣ್ಣ ಅವರೇ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದು ಕಡೂರು ತಾಲೂಕಿನ ಜಿ.ತಿಮ್ಮಾ ಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರಕಾರಿ  ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಲು ಕ್ಷೇತ್ರ ಶಿಕ್ಷಣಾಕಾರಿಗಳು ಹಣದ ಬೇಡಿಕೆ ಇಟ್ಟಿದ್ದರು

ಈ ಇಂದು ವಿಚಾರ ಕುರಿತಂತೆ ಶಿಕ್ಷಕ ಲೋಕಾಯು ಕ್ತರಿಗೆ ದೂರನ್ನು ನೀಡಿದ್ದರು.ದೂರಿನ ಹಿನ್ನಲೆ ಯಲ್ಲಿ ಇತ್ತ ಈ ಸಂಬಂಧ ಶಿಕ್ಷಕ ರಾಜಪ್ಪ ಅವ ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿ ತಿಮ್ಮಾಪುರ ಗೇಟ್‌ನಲ್ಲಿ 15 ಸಾವಿರ ಲಂಚ ತಗೆದುಕೊಳ್ಳುವಾಗ ಸಿಕ್ಕಿ ಬಿದ್ದಿದ್ದರು ಹಣವನ್ನು ತಗೆದುಕೊಳ್ಳುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದ ಬಿಇಒ ಅವರನ್ನು ವಿಚಾರಣೆ ನಂತರ ಕೊನೆಗೂ ಜೈಲಿಗೆ ಕಳುಹಿಸಿದ್ದಾರೆ

ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಯಣ್ಣ ಅವರನ್ನು ಲೋಕಾ ಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಬಲೆಗೆ ಕೆಡವಿದ್ದು 15 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು ವಶಕ್ಕೆ ತಗೆದುಕೊಂಡು ಸುಧೀರ್ಘವಾಗಿ ವಿಚಾರಣೆ ಮಾಡಿದ ನಂತರ ನ್ಯಾಯಾಧೀಶರ ಮುಂದೆ ಹಾಜರು ಮಾಡಿ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಡೂರು ತಾಲೂಕಿನ ಜಿ. ತಿಮ್ಮಾಪುರ ಗೇಟ್ ಬಳಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದರು ವಶಕ್ಕೆ ತಗೆದು ಕೊಂಡಿದ್ದ ಲೋಕಾ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ವಿಚಾರಣೆಯನ್ನು ಮಾಡಿ ಕೊನೆಗೆ ಜೈಲಿನ ದಾರಿ ತೋರಿಸಿದ್ದಾರೆ.

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.