ಧಾರವಾಡದ ಉಪ್ಪಿನ ಬೆಟಗೇರಿಯಿಂದ ಆರಂಭಗೊಂಡ ಕಾಂಗ್ರೆಸ್ ಪಾದಯಾತ್ರೆ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಗೆ ಸಾಥ್ ನೀಡಿದ್ದಾರೆ ಪಕ್ಷದ ಮುಖಂಡರು ಕಾರ್ಯಕರ್ತರು…..

Suddi Sante Desk
ಧಾರವಾಡದ ಉಪ್ಪಿನ ಬೆಟಗೇರಿಯಿಂದ ಆರಂಭಗೊಂಡ ಕಾಂಗ್ರೆಸ್ ಪಾದಯಾತ್ರೆ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಗೆ ಸಾಥ್ ನೀಡಿದ್ದಾರೆ ಪಕ್ಷದ ಮುಖಂಡರು ಕಾರ್ಯಕರ್ತರು…..

ಧಾರವಾಡ

ರೈತರ ಹಲವಾರು ಸಮಸ್ಯೆಗಳನ್ನು ಮುಂದಿಟ್ಟು ಕೊಂಡು ರಾಜ್ಯ ಸರ್ಕಾರದ ವಿರುದ್ಧ ಧಾರವಾಡ ಗ್ರಾಮೀಣ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೂ ಪಾದಯಾತ್ರೆ ಆರಂಭಿಸಿದ್ದಾರೆ.

ಉಪ್ಪಿನ ಬೆಟಗೇರಿ ಗ್ರಾಮದ ವಿರುಪಾಕ್ಷೇಶ್ವರ ದೇವಸ್ಥಾನದಿಂದ ಈ ಪಾದಯಾತ್ರೆ ಆರಂಭವಾ ಗಿದ್ದು ಪುಡಕಲಕಟ್ಟಿ,ಕರಡಿಗುಡ್ಡ, ತಿಮ್ಮಾಪುರ, ಮರೇವಾಡ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಸ್ವತಃ ಈ ಪಾದಯಾತ್ರೆ ಯಲ್ಲಿ ಪಾಲ್ಗೊಂಡಿದ್ದಾರೆ.ಬಿದ್ದ ಮನೆಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರ ನೀಡುವುದು ರೈತರ ಹೊಲಗಳಿಗೆ ರಸ್ತೆ ನಿರ್ಮಾಣ, ಬೆಳೆ ವಿಮೆ, ಬೆಳೆ ಪರಿಹಾರ ನೀಡುವುದು ಸೇರಿದಂತೆ ರೈತರ ಅನೇಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಈ ಪಾದಯಾತ್ರೆ ನಡೆಸಲಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.