ಮುಖ್ಯ ಶಿಕ್ಷಕ ಅಮಾನತು ಮಾಡಿದ ತಪ್ಪಿಗಾಗಿ ಮುಖ್ಯಶಿಕ್ಷಕ ಚಿನ್ಮಯಾನಂದ ಮೂರ್ತಿಯನ್ನು ಅಮಾನತು ಮಾಡಿದ DDPI

Suddi Sante Desk
ಮುಖ್ಯ ಶಿಕ್ಷಕ ಅಮಾನತು ಮಾಡಿದ ತಪ್ಪಿಗಾಗಿ ಮುಖ್ಯಶಿಕ್ಷಕ ಚಿನ್ಮಯಾನಂದ ಮೂರ್ತಿಯನ್ನು ಅಮಾನತು ಮಾಡಿದ DDPI

ಪಾಂಡವಪುರ

ಮುಖ್ಯಶಿಕ್ಷಕ ರೊಬ್ಬರನ್ನು ಅಮಾನತು ಮಾಡಿರುವ ಘಟನೆ ಪಾಂಡವಪುರದಲ್ಲಿ  ತಾಲ್ಲೂಕಿನ ಕಟ್ಟೇರಿ ಗ್ರಾಮದ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಉಸ್ತುವಾರಿ ಹಾಗೂ ಮುಖ್ಯ ಶಿಕ್ಷಕನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕಟ್ಟೇರಿ ಗ್ರಾಮದಲ್ಲಿರುವ ಪ್ರೌಢಶಾಲಾ ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಸತಿ ನಿಲಯದ ಉಸ್ತುವಾರಿ ಹೊತ್ತಿದ್ದ ಮುಖ್ಯಶಿಕ್ಷಕ ಚಿನ್ಮಯಾ ನಂದ ಮೂರ್ತಿ ವಿದ್ಯಾರ್ಥಿನಿಯರಿಂದ ಥಳಿತ ಕ್ಕೊಳಗಾಗಿ ಪೊಲೀಸರ ಅತಿಥಿಯಾಗಿದ್ದರು ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಸಧ್ಯ ಅಮಾನತು ಮಾಡಲಾಗಿದೆ

 

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ. ಜವರೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಖ್ಯ ಶಿಕ್ಷಕನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು ಘಟನೆ ವಿವರ ಪಡೆದು ಮುಖ್ಯ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊ ಳಿಸಿ ಆದೇಶ ಹೊರಡಿಸಿದ್ದಾರೆ.

ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿ ಕೊಂಡು ತನಿಖೆ ನಡೆಸುತ್ತಿದ್ದಾರೆ ಆರೋಪಿ ಶಿಕ್ಷಕನನ್ನು ವಿಚಾರಣೆಗೊಳಪಡಿಸಿದ್ದಾರೆ. ಕಾಮುಕ ಮುಖ್ಯಶಿಕ್ಷಕನನ್ನು ಕೆಲಸದಿಂದ ವಜಾ ಗೊಳಿಸಲು ಪ್ರಗತಿ ಪರಿಶೀಲನಾ ಸಭೆಬ ಯಲ್ಲಿನಿರ್ಣಯ ಕೈಗೊಳ್ಳಲಾಯಿತು.

ಸುದ್ದಿ ಸಂತೆ ನ್ಯೂಸ್ ಪಾಂಡವಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.