ಚೇತರಿಸಿಕೊಂಡು ಅಹಮದಾಬಾದ್ ಗೆ ತೆರಳಿಸಿದ ಪ್ರಧಾನಿ ನರೇಂದ್ರ ಮೋದಿ ಸಹೋದರ ಮತ್ತು ಕುಟುಂಬದವರು – ಅಪಘಾತದಲ್ಲಿ ಗಾಯಗೊಂಡಿದ್ದ ಕುಟುಂಬದವರನ್ನು ಬೀಳ್ಕೊಟ್ಟ ಗಣ್ಯರು

Suddi Sante Desk
ಚೇತರಿಸಿಕೊಂಡು ಅಹಮದಾಬಾದ್ ಗೆ ತೆರಳಿಸಿದ ಪ್ರಧಾನಿ ನರೇಂದ್ರ ಮೋದಿ ಸಹೋದರ ಮತ್ತು ಕುಟುಂಬದವರು – ಅಪಘಾತದಲ್ಲಿ ಗಾಯಗೊಂಡಿದ್ದ ಕುಟುಂಬದವರನ್ನು ಬೀಳ್ಕೊಟ್ಟ ಗಣ್ಯರು

ಮೈಸೂರು

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರು ಚೇತರಿಸಿ ಕೊಂಡು ವಿಶೇಷ ವಿಮಾನದ ಮೂಲಕ ಮೈಸೂ ರಿನಿಂದ ಅಹಮದಾಬಾದ್ಗೆ ತೆರಳಿದ್ದಾರೆ.ಹೌದು ಮೈಸೂರು ತಾಲೂಕು ಕಡಕೊಳ ಬಳಿ ಮಂಗಳ ವಾರ ಸಂಭವಿಸಿದ ಅಪಘಾತದಲ್ಲಿ ಗಾಯ ಗೊಂಡು ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಬೀಳ್ಕೊಟ್ಟರು.

ಇದೇ ವೇಳೆ ಮಾತನಾಡಿದ ಸಚಿವರು ಪ್ರಹ್ಲಾದ್ ಮೋದಿಯವರು ಹಾಗೂ ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು ಅವರನ್ನು ವಿಶೇಷ ವಿಮಾನದ ಮೂಲಕ ಅಹಮದಾಬಾದ್ ಗೆ ಕಳುಹಿಸಿಕೊಡಲಾಯಿತು ಸಧ್ಯ ಸಂಪೂರ್ಣ ವಾಗಿ ಗುಣಮುಖರಾಗಿದ್ದಾರೆ ಈ ವೇಳೆ ಪಾಲಿಕೆ ಮಹಾಪೌರರಾದ ಶಿವಕುಮಾರ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಮೈಸೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.