ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಹುಟ್ಟು ಹಾಕಿದೆ ಹಲವು ಅನುಮಾನಗಳನ್ನು

Suddi Sante Desk
ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು  – ಹುಟ್ಟು ಹಾಕಿದೆ ಹಲವು ಅನುಮಾನಗಳನ್ನು

ಮಡಿಕೇರಿ

ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಕೊಡಗಿನ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡಿದೆದೆ.ಸ್ಥಳೀಯ ನಿವಾಸಿಗಳಾದ ಯೇಸುದಾಸ್ ಹಾಗೂ ತಾರ ದಂಪತಿ ಪುತ್ರ ರಕ್ಷಿತ್ ಎಂಬುವವರ ಪತ್ನಿ ಕಾವ್ಯ (23) ಮೃತಪಟ್ಟ ಮಹಿಳೆಯಾಗಿದ್ದಾರೆ.

ರಕ್ಷಿತ್ ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದಾಗ ಕಾವ್ಯ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು. ನಾಲ್ಕು ವರ್ಷಗಳ ಹಿಂದೆ ರಕ್ಷಿತ್ ಹಾಗೂ ಕಾವ್ಯ ಪ್ರೇಮ ವಿವಾಹವಾಗಿದ್ದರೆನ್ನಲಾಗಿದ್ದು ಮಕ್ಕಳಿರ ಲಿಲ್ಲ ಎಂದು ತಿಳಿದು ಬಂದಿದೆ.ಮೃತಳ ತಂದೆ, ಆರ್ಜಿ ಗ್ರಾ.ಪಂ ವ್ಯಾಪ್ತಿಯ ಕಿರುಮಕ್ಕಿ ಗ್ರಾಮದ ನಿವಾಸಿ ವಂಸತ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ಕೊಡಗು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.