ದೈಹಿಕ ಶಿಕ್ಷಕರ ವರ್ಗಾವಣೆ ಆದೇಶಕ್ಕೆ ಖಂಡನೆ ಶೀಘ್ರದಲ್ಲೇ ದೊಡ್ಡ ಪ್ರಮಾಣದಲ್ಲಿ ಹೋರಾಟದ ಎಚ್ಚರಿಕೆ

Suddi Sante Desk
ದೈಹಿಕ ಶಿಕ್ಷಕರ ವರ್ಗಾವಣೆ ಆದೇಶಕ್ಕೆ ಖಂಡನೆ ಶೀಘ್ರದಲ್ಲೇ ದೊಡ್ಡ ಪ್ರಮಾಣದಲ್ಲಿ ಹೋರಾಟದ ಎಚ್ಚರಿಕೆ

ಸಿದ್ದಾಪುರ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 130ಕ್ಕಿಂತ ಕಡಿಮೆ ಇರುವ ಶಾಲೆಗಳಲ್ಲಿ ಇರುವ ದೈಹಿಕ ಶಿಕ್ಷಕರನ್ನು ತೆಗೆಯಲು ಸರ್ಕಾರದ ಆದೇಶದ ಬಗ್ಗೆ ವಸಂತ ಎಲ್‌. ನಾಯ್ಕ ಮನಮನೆ ಖಂಡಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು ತಾಲೂಕಿ ನಲ್ಲಿ 102 ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಗಳಿವೆ.ಆದರೆ ಇರುವ ದೈಹಿಕ ಶಿಕ್ಷಕರು ಕೇವಲ 8 ಮಾತ್ರ ಆದರೆ ಈಗಿನ ಆದೇಶದ ಪ್ರಕಾರ 130ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆ ಗಳಲ್ಲಿರುವ ದೈಹಿಕ ಶಿಕ್ಷಕರನ್ನು ತೆಗೆಯಲು ಮುಂದಾಗಿರುವ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಸರ್ಕಾರವು ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿ ಇದರೊಂದಿಗೆ ದೈಹಿಕ ಶಿಕ್ಷಕರ ವರ್ಗಾವಣೆ ಆದೇಶಕ್ಕೆ ಖಂಡನೆ ಯನ್ನು ಮಾಡಿದರು.

ಸುದ್ದಿ ಸಂತೆ ನ್ಯೂಸ್ ಸಿದ್ದಾಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.