ವಿನಯ ಕುಲಕರ್ಣಿ ಗೆ ಶಾಕ್ ‌ನೀಡಿದ ನ್ಯಾಯಾಲಯ – ಚುನಾವಣೆಯ ಹೊಸ್ತಿಲಲ್ಲಿ ಬಿಗ್ ಶಾಕ್……

Suddi Sante Desk
ವಿನಯ ಕುಲಕರ್ಣಿ ಗೆ ಶಾಕ್ ‌ನೀಡಿದ ನ್ಯಾಯಾಲಯ – ಚುನಾವಣೆಯ ಹೊಸ್ತಿಲಲ್ಲಿ ಬಿಗ್ ಶಾಕ್……

ಬೆಂಗಳೂರು

ಮಾಜಿ ಸಚಿವ ವಿನಯ ಕುಲಕರ್ಣಿ ಗೆ ಧಾರವಾಡ ಜಿಲ್ಲೆಗೆ ಪ್ರವೇಶ ನೀಡಲು ನ್ಯಾಯಾಲಯ ಅನು ಮತಿ ನೀಡಲು ನಿರಾಕರಿಸಿದೆ ಹೌದು ಜಿಲ್ಲೆಗೆ ಪ್ರವೇಶ ಮಾಡುವ ಕುರಿತು ವಿನಯ ಕುಲಕರ್ಣಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಈ ಒಂದು ವಿಚಾರ ಕುರಿತು ವಿಚಾರಣೆ ನಡೆಸಿದ ನ್ಯಾಯಾ ಲಯ ಬಿಗ್ ಶಾಕ್ ನೀಡಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಅವರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದೆ. ಅವರಿಗೆ ಧಾರವಾಡ ಪ್ರವೇಶಕ್ಕೆ ನ್ಯಾಯಾಲಯ ನಿರಾಕರಿಸಿದೆ.

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಲುಕಿ ರುವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸದಂತೆ ಈ ಹಿಂದೆ ನ್ಯಾಯಾಲಯ ಆದೇಶಿಸಿತ್ತು ಹೀಗಾಗಿ ತಾವು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಕಾರಣ ಅನುಮತಿ ನೀಡುವಂತೆ ಕೋರಿ ಬೆಂಗಳೂರಿನ ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯದಲ್ಲಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯ ಅನುಮತಿ ನಿರಾಕರಿಸಿದ್ದು ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರ ಮೂಲಕವೇ ವಿನಯ ಕುಲಕರ್ಣಿ ಪ್ರಚಾರ ಕಾರ್ಯ ನಡೆಸಬೇಕಿದೆ.ವಿನಯ ಕುಲಕರ್ಣಿ ಪರವಾಗಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

ಹೀಗಾಗಿ ನಾಯಕನಿಲ್ಲದೇ ವಿನಯ ಕುಲಕರ್ಣಿ ಅನುಪಸ್ಥಿತಿಯಲ್ಲಿ ಸಧ್ಯ ಚುನಾವಣೆಯನ್ನು ಮಾಡೊದು ಧಾರವಾಡ ಗ್ರಾಮೀಣ ಪ್ರದೇಶದ ಕಾಂಗ್ರೆಸ್ ಪಕ್ಷದವರದ್ದಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.