This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಚಿವ ಸಂತೋಷ ಲಾಡ್ ಗುಡುಗು…..

WhatsApp Group Join Now
Telegram Group Join Now

ಹಗರಿಬೊಮ್ಮನಹಳ್ಳಿ –

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಮಾಜಿ ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದರು. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಯಲ್ಲಿ ಮಾತನಾಡಿದ ಅವರು ಅವರೊಬ್ಬರು ಸುಳ್ಳು ಹೇಳುವ ಮನುಷ್ಯ ಎನ್ನುತ್ತಾ ಟೀಕಿಸಿದ್ದಾರೆ.

ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಕಾಂಗ್ರೆಸ್‌ನಿಂದ ಮಂಗಳವಾರ ಹಮ್ಮಿಕೊಂಡಿದ್ದ ಕೋವಿಡ್‌ ಸಹಾಯಹಸ್ತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಿಜೆಪಿ ಆಡಳಿತದಲ್ಲಿ ಪೆಟ್ರೋಲ್‌ ಸಿಲಿಂಡರ್‌ ಬೆಲೆಗಳ ಏರಿಕೆಯೊಂದಿಗೆ ಅಗತ್ಯ ವಸ್ತುಗಳು ಗಗನಕ್ಕೇರಲು ಕಾರಣರಾಗಿದ್ದಾರೆ ಎಂದು ಆರೋಪಿಸಿದರು

ಕೋವಿಡ್‌ನಿಂದ ಸಾವಿಗೀಡಾದವರಿಗೆ ಲಕ್ಷ ರೂಪಾಯಿ ಪರಿಹಾರ ಬಂತಾ? ಬೆಳೆ ನಷ್ಟವಾದ ರೈತರಿಗೆ ಪರಿಹಾರ ದೊರೆಯಿತಾ? ನಿರುದ್ಯೋಗಿ ಗಳಿಗೆ ಕೆಲಸ ಸಿಕ್ಕಿತೆ ಎಂಬೆಲ್ಲಾ ಪ್ರಶ್ನೆಗಳನ್ನು ನಮ್ಮ ಕಾಂಗ್ರೆಸ್‌ ಕಾರ್ಯಕರ್ತರು ಸಾರ್ವಜನಿಕರ ಮನೆ ಮನೆಗೆ ಹೋಗಿ ಪ್ರಶ್ನಿಸಬೇಕೆಂದು ಕರೆ ನೀಡಿದರು.ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೀರಿ ಪಕ್ಷವನ್ನು ಸದೃಢವಾಗಿ ಕಟ್ಟುತೀರಿ ಎಂದು ಪಕ್ಷ ನಂಬಿದೆ.ಆ ನಂಬಿಕೆ ಉಳಿಯುವಂತ ಕೆಲಸ ಮಾಡಬೇಕಿದೆ ಎಂದರು.

ಸಂಡೂರು ಶಾಸಕ ಈ ತುಕಾರಾಂ ಕಾಂಗ್ರೆಸ್‌ನ ಗ್ರಾಮೀಣ ಪ್ರದೇಶದ ಜಿಲ್ಲಾಧ್ಯಕ್ಷ ಬಿ.ವಿ. ಶಿವಯೋಗಿ ಹಾಗೂ ಮಹಿಳಾ ಜಿಲ್ಲಾಧ್ಯಕ್ಷೆ ಆಶಾಲತಾ ಸೋಮಪ್ಪ ಮಾತನಾಡಿದರು. ಜಿಪಂ ಮಾಜಿ ಸದಸ್ಯರಾದ ಹೆಗ್ಡಾಳ್‌ ರಾಮಣ್ಣ, ಅಕ್ಕಿ ತೋಟೇಶ್‌, ಕೆಪಿಸಿಸಿ ಸದಸ್ಯ ಕುರಿ ಶಿವಮೂರ್ತಿ, ಮಹಿಳಾ ತಾಲೂಕು ಅಧ್ಯಕ್ಷೆ ಯಶೋದಾ ಭಾನಮ್ಮ, ಮುಖಂಡರಾದ ಇಮಾಮ್‌, ಮಹಮದ್‌, ನೆಲ್ಲು ಇಸ್ಮಾಯಿಲ್‌, ಚಿಂತ್ರಪಳ್ಳಿ ದೇವೇಂದ್ರ, ಕನ್ನಿಹಳ್ಳಿ ಚಂದ್ರಶೇಖರ್‌, ಡಿಶ್‌ ಮಂಜುನಾಥ, ಪತ್ರೇಶ್‌ ಹಿರೇಮಠ್‌ ಮತ್ತಿತರರು ಇದ್ದರು.


Google News

 

 

WhatsApp Group Join Now
Telegram Group Join Now
Suddi Sante Desk