This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಲೇಡಿ ಇನ್ಸ್ಪೆಕ್ಟರ್,ಸಬ್ ಇನ್ಸ್ಪೆಕ್ಟರ್ ಸೇರಿ ಮೂವರ ಅಮಾನತು ಅಮಾನತಿನ ಹಿಂದಿನ ಕಾರಣ ಕೇಳಿದರೆ ಶಾಕ್ ಆಗತೀರಾ…..

WhatsApp Group Join Now
Telegram Group Join Now

ಬೆಂಗಳೂರು –

ಲೇಡಿ ಇನ್ಸ್ಪೆಕ್ಟರ್ ,ಸಬ್ ಇನ್ಸ್ಪೇಕ್ಟರ್ ಸೇರಿದಂತೆ ಮೂವರು ಅಮಾನತು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೌದು ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕನ ವಿರುದ್ಧ ಸುಳ್ಳು ಕೇಸ್ ದಾಖಲಿಸಿದ್ದ ಮಹಿಳಾ ಇನ್ಸ್ಪೆಕ್ಟರ್, ಈ ಪ್ರಕರಣದ ಆಂತರಿಕ ತನಿಖೆ ನಡೆಸುತ್ತಿದ್ದ ಡಿಸಿಪಿ ವಿರುದ್ಧವೇ ಸ್ಟಿಂಗ್ ಆಪರೇಷನ್ ಯತ್ನಿಸಿದ್ದ ಸಬ್ ಇನ್ಸ್ಪೆಕ್ಟರ್ ಸೇರಿ ಮೂವರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಗೊಳಿಸಿದ್ದಾರೆ.

ಆರ್ ಎಂಸಿ ಯಾರ್ಡ್ ಪೊಲೀಸ್ ಇನ್ಸ್ ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ ಪೆಕ್ಟರ್ ಅಂಜಿನಪ್ಪ ಹಾಗೂ ಇನ್ನೊಬ್ಬ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.ಇನ್ಸ್ಪೆಕ್ಟರ್ ಪಾರ್ವ ತಮ್ಮ ಹಾಗೂ ಎಸ್‌ಐ ಅಂಜಿನಪ್ಪ ಮತ್ತು ಇನ್ನೊಬ್ಬ ಪೊಲೀಸ್ ಬೀದಿಬದಿ ವ್ಯಾಪಾರಿ ಬಳಿ ಮಾಮೂಲಿ ಕೇಳಿದ್ದು, ಆತ ಕೊಡಲು ನಿರಾಕರಿಸಿದ್ದಕ್ಕೆ ಬಲವಂತ ವಾಗಿ ಗಾಂಜಾ ಬೆರೆಸಿದ ಸಿಗರೇಟ್ ಸೇದುವಂತೆ ಮಾಡಿ ಗಾಂಜಾ ಸೇವನೆ ಎಂದು ಕೇಸು ದಾಖಲಿಸಿ ದ್ದರು.

ಬಳಿಕ ಇದರಿಂದ ನೊಂದ ಆತ ಆತ್ಮಹತ್ಯೆಗೆ ಯತ್ನಿಸಿದ್ದ.ಈ ಕೇಸ್ ಸಂಬಂಧ ಪೊಲೀಸರ ವಿರುದ್ಧ ಆರೋಪ ಕೇಳಿ ಬಂದಿದ್ದು, ಆಂತರಿಕ ತನಿಖೆ ವೇಳೆ ಡಿಸಿಪಿ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಹೋಗಿ ಎಸ್ಐ ಅಂಜಿನಪ್ಪ ಸಿಕ್ಕಿಬಿದ್ದಿದ್ದ.ಈ ಮೂವರ ವಿರುದ್ಧ ನಡೆದ ಆಂತರಿಕ ತನಿಖೆಯಲ್ಲಿ ಆರೋಪ ದೃಢಪಟ್ಟು ವರದಿ ಸಲ್ಲಿಕೆಯಾದ ಹಿನ್ನೆಲೆ ಯಲ್ಲಿ ಅಮಾನತುಗೊಳಿಸಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk