ಚುನಾವಣಾ ತರಬೇತಿ ಮುಗಿಸಿ ಮನೆಗೆ ಹೋಗುವಾಗ ಶಿಕ್ಷಕ ಸಾವು – ಶಿಕ್ಷಕನ ಸಾವಿಗೆ ಕಂಬನಿ ಮಿಡಿದ ನಾಡಿನ ಶಿಕ್ಷಕರು…..

Suddi Sante Desk
ಚುನಾವಣಾ ತರಬೇತಿ ಮುಗಿಸಿ ಮನೆಗೆ ಹೋಗುವಾಗ ಶಿಕ್ಷಕ ಸಾವು – ಶಿಕ್ಷಕನ ಸಾವಿಗೆ ಕಂಬನಿ ಮಿಡಿದ ನಾಡಿನ ಶಿಕ್ಷಕರು…..

ಧಾರವಾಡ

ಚುನಾವಣಾ ತರಬೇತಿ ಮುಗಿಸಿ ಮನೆಗೆ ಹೋಗುವಾಗ ಶಿಕ್ಷಕ ಮಲ್ಲಪ್ಪ ಸೋನಾರ ಅನಾರೋಗ್ಯದಿಂದ ನಿಧನ ಹೌದು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿಯಲ್ಲಿದ್ದ ಕುಂದಗೋಳ ಪಟ್ಟಣದ ಹರಭಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಅವರು ನಿಧನರಾಗಿದ್ದಾರೆ.

ಜೆಎಸ್ಎಸ್ ಕಾಲೇಜಿನಲ್ಲಿ  71-ಧಾರವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿತರಾದ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸಲಾಗಿತ್ತು.

ಈ ತರಬೇತಿಯಲ್ಲಿ ಭಾಗವಹಿಸಿದ್ದ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನೇಮಕ ಗೊಂಡಿದ್ದ ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ ಅವರು ಮಧ್ಯಾಹ್ನದ ನಂತರ ತರಬೇತಿ ಮುಗಿಸಿ, ಮೆಟ್ಟಿಲು ಇಳಿದು ಮನೆಗೆ ಹೋಗುವಾಗ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಗಂಡುಮಕ್ಕಳಿದ್ದಾರೆ. ಶಿಕ್ಷಕ ಸೋನಾರ ಅವರ ಆಕಸ್ಮಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಜಿಲ್ಲಾ ಚುನಾವಣಾಧಿಕಾರಿಗಳು, ಮೃತರ ಕುಟುಂಬಕ್ಕೆ ಸರಕಾರದಿಂದ ಸೀಗುವ ಎಲ್ಲ ನೆರವು ತಲುಪಿಸಲಾಗುವುದೆಂದು ತಿಳಿಸಿ ದ್ದಾರೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.