ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ – ಆತ್ಮಹತ್ಯೆಗೆ ಕಾರಣ ಹುಡುಕುತ್ತಿರವ ಪೊಲೀಸರು…..

Suddi Sante Desk
ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ – ಆತ್ಮಹತ್ಯೆಗೆ ಕಾರಣ ಹುಡುಕುತ್ತಿರವ ಪೊಲೀಸರು…..

ಬೆಳಗಾವಿ –

ಖಾಸಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕಿ ಸೇರಿಕೊಂಡು ಕಿರುಕುಳ ಕೊಡುತ್ತಿ ದ್ದಾರೆ ಎಂದು ಬೇಸತ್ತು ಅದೇ ಶಾಲೆಯ ಸಹ ಶಿಕ್ಷಕಿಯೊಬ್ಬರು ಡೆತ್‌ನೋಟ್‌ ಬರೆದಿಟ್ಟು ರೈಲಿಗೆ ತಲೆಯೊಡ್ಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಯಲ್ಲಿ ನಡೆದಿದೆ.

ರಾಯಬಾಗ ರೈಲು ನಿಲ್ದಾಣದ ಸಮೀತ ಈ ಒಂದು ರ್ಘಟನೆ ಸಂಭವಿಸಿದೆ. ಅನ್ನಪೂರ್ಣ ರಾಜು ಬಸಾಪೂರೆ (55) ಎಂಬ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಇವರು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ನಿವಾಸಿ ಆಗಿದ್ದು ಖಾಸಗಿ ಅನುದಾನಿತ ಶಾಲೆಯಲ್ಲಿ ಕಾರ್ಯ ನಿರ್ವಹಿಸು ತ್ತಿದ್ದರು.ಆದರೆ, ಈ ಖಾಸಗಿ ಶಿಕ್ಷಣ ಸಂಸ್ಥೆಯ ಹೆಡ್ ಮಾಸ್ಟರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಈ ಬಗ್ಗೆ ಡೆತ್‌ನೋಟ್‌ ಬರೆದಿಟ್ಟು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಮುಖ್ಯಶಿಕ್ಷಕಿ ಹಾಗೂ ಸಹ ಶಿಕ್ಷಕಿಯ ಹೆಸರನ್ನೂ ಬರೆದಿಟ್ಟಿದ್ದಾರೆ.

ಸುದ್ದಿ ಸಂತೆ ಬೆಳಗಾವಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.