ಆರಂಭಗೊಂಡ ನಾಮಪತ್ರ ಸಲ್ಲಿಕೆ ಕಾರ್ಯ – ಧಾರವಾಡ ಜಿಲ್ಲೆಯಲ್ಲಿ ಮೊದಲ ದಿನ ನಾಮಪತ್ರ ಸಲ್ಲಿಸಿದ್ದು ಯಾರು ಯಾರು ಎಷ್ಟು ಗೊತ್ತಾ……

Suddi Sante Desk
ಆರಂಭಗೊಂಡ ನಾಮಪತ್ರ ಸಲ್ಲಿಕೆ ಕಾರ್ಯ – ಧಾರವಾಡ ಜಿಲ್ಲೆಯಲ್ಲಿ ಮೊದಲ ದಿನ ನಾಮಪತ್ರ ಸಲ್ಲಿಸಿದ್ದು ಯಾರು ಯಾರು ಎಷ್ಟು ಗೊತ್ತಾ……

ಧಾರವಾಡ

ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-23 ರ ನಾಮಪತ್ರ ಸಲ್ಲಿಕೆ ಆರಂಭ ಗೊಂಡಿದ್ದು ಮೊದಲ ದಿನ ಧಾರವಾಡ ಜಿಲ್ಲೆಯಲ್ಲಿ ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿವೆ. ಧಾರವಾಡ ಜಿಲ್ಲೆಯ ವಿವಿಧ ವಿಧಾನಸಭಾ ಮತಕ್ಷೇತ್ರದಲ್ಲಿ ನಾಮತ್ರ ಸಲ್ಲಿಕೆಯ ಮೊದಲ ದಿನ ಒಟ್ಟು 7 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಕರ್ನಾಟಕ ವಿಧಾಸಭೆಗೆ ಸಾರ್ವತ್ರಿಕ ಚುನಾವಣೆ ಗಳು ಘೋಷಣೆಯಾಗಿದ್ದು ನಾಮಪತ್ರ ಸಲ್ಲಕೆಯ ಮೊದಲ ದಿನವಾದ ಇಂದು ಕುಂದಗೋಳ 1, ಧಾರವಾಡ 3, ಹುಬ್ಬಳ್ಳಿ ಧಾರವಾಡ ಪೂರ್ವ 1 ಮತ್ತು ಹುಬ್ಬಳ್ಳಿ ಧಾರವಾಡ ಪಶ್ಚಿಮ ಮತಕ್ಷೇತ್ರಕ್ಕೆ 2 ಸೇರಿ ಒಟ್ಟು 7 ನಾಮಪತ್ರಗಳು ಸಲ್ಲಿಕ ಆಗಿವೆ

ಕುಂದಗೋಳ- 70 ವಿಧಾನಸಾಭಾ ಮತಕ್ಷೇತ್ರಕ್ಕೆ ಶಿವಾನಂದ ಹಣಮಂತಪ್ಪ ಮುತ್ತಣ್ಣವರ (ಭಾ.ಜ.ಪಾ)ಹುಬ್ಬಳ್ಳಿ ಧಾರವಾಡ ಪೂರ್ವ-72 ವಿಧಾನಸಭಾ ಮತಕ್ಷೇತ್ರಕ್ಕೆ ವೀರಭದ್ರಪ್ಪ ಹಾಲಹರವಿ(ಜನತಾದಳ (ಜ್ಯಾತ್ಯಾತೀತ) ಹುಬ್ಬಳ್ಳಿ ಧಾರವಾಡ ಪಶ್ಚಿಮ-74 ವಿಧಾನಸಭಾ ಮತ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ರೊಟ್ಟಗವಾಡ (ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ) ಅವರು ಎರಡು ನಾಮತ್ರಗಳನ್ನು ಮತ್ತು ಧಾರವಾಡ-71 ವಿಧಾನಸಭಾ ಮತಕ್ಷೇತ್ರಕ್ಕೆ ಅಮೃತ ಅಯ್ಯಪ್ಪ ದೇಸಾಯಿ( ಭಾ.ಜ.ಪಾ)ಮಧುಲತಾ ಗೌಡರ (ಪಕ್ಷೇತರ), ಸಿದ್ದಲಿಂಗೇಶ್ವರ ಬಾಗೂರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ) ಅವರು ನಾಮಪತ್ರ ಸಲ್ಲಿಸಿದ್ದಾರೆ

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.