ಮೇಯರ್ ಮಾಡಬೇಕಾದ ಕೆಲಸವನ್ನು ಮಾಡಿದ ಕೈ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ – ಪಾಲಿಕೆಯ ಸದಸ್ಯರೊಂದಿಗೆ ತೆರಳಿ ಸಮಸ್ಯೆ ಆಲಿಸಿದ ನಾಯಕ…..

Suddi Sante Desk
ಮೇಯರ್ ಮಾಡಬೇಕಾದ ಕೆಲಸವನ್ನು ಮಾಡಿದ ಕೈ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ – ಪಾಲಿಕೆಯ ಸದಸ್ಯರೊಂದಿಗೆ ತೆರಳಿ ಸಮಸ್ಯೆ ಆಲಿಸಿದ ನಾಯಕ…..

ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಳೆಯ ಅಬ್ಬರ ಜೋರಾಗಿದೆ.ಕಳೆದ ಆರೇಳು ದಿನಗಳಿಂದ ಮಳೆ ಬಿಟ್ಟು ಬಿಡಲಾರದೇ ಸುರಿಯುತ್ತಿದ್ದು ಇನ್ನೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಜನರು ಸಮಸ್ಯೆ ಯನ್ನು ಅನುಭವಿಸುತ್ತಿದ್ದಾರೆ

ಇವೆಲ್ಲದರ ನಡುವೆ ಮಹಾನಗರ ಪಾಲಿಕೆಯ ಮೇಯರ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಬೇಕಾಗಿತ್ತು ಆದರೆ ಯುವ ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಮಳೆಯಿಂದ ಹಾನಿಗೊಳಗಾದ ಸ್ತ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್‌ ನಂ. 53 ರ ಕಲಾವಿದರ ಪ್ಲಾಟ್‌ಗೆ ಪಾಲಿಕೆ ಸದಸ್ಯರಾದ ಆರೀಫ್‌ ಭದ್ರಾಪುರ ಅವರೊಂದಿಗೆ ಭೇಟಿ ನೀಡಿ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ, ಸ್ಥಳೀಯ ನಿವಾಸಿಗಳ ಅಹವಾಲು ಆಲಿಸಿದರು

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.