ಬಸ್ ಕಾರು ಅಪಘಾತ ತಾಯಿ ಮಗ ಸಾವು – ಸ್ಥಳದಲ್ಲೇ ಇಬ್ಬರು ಸಾವು….‌.

Suddi Sante Desk
ಬಸ್ ಕಾರು ಅಪಘಾತ ತಾಯಿ ಮಗ ಸಾವು – ಸ್ಥಳದಲ್ಲೇ ಇಬ್ಬರು ಸಾವು….‌.

ಮೂಡಗೆರೆ

ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿ ಯಾಗಿ ತಾಯಿ- ಮಗ ಸಾವಿಗೀಡಾದ ಘಟನೆ ಮೂಡಿಗರೆ
ಯಲ್ಲಿ ನಡೆದಿದೆ. ಹೌದು ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ನಿಧನರಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ಈ ಒಂದು ಘಟನೆ ನಡೆದಿದೆ.ಪೂಜಾ ಹಿರೇಮಠ, ರಾಜಶೇಖರ್ ಹಿರೇಮರ್ ಮೃತರಾದವ ರಾಗಿದ್ದಾರೆ.ಮೃತರು ಮೂಲತಃ ಬೆಂಗಳೂರಿನ ಕೋಣನಕುಂಟೆಯ ನಿವಾಸಿಗಳಾಗಿದ್ದಾರೆ.

ದುರ್ಘಟನೆಯಲ್ಲಿ ಶಿವಯಾಗಯ್ಯ ಹಿರೇಮಠ ಎಂಬವರು ಗಂಭೀರ ಗಾಯಗೊಂಡಿದ್ದು ಇವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಮತ್ತು ಸಕಲೇಶಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದಿದೆ.

ಸುದ್ದಿ ಸಂತೆ ನ್ಯೂಸ್ ಮೂಡಗೆರೆ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.