ಸೆಪ್ಟಂಬರ್ 15 ರಂದು ಶಾಲೆಗಳಲ್ಲಿ ತಪ್ಪದೇ ಈ ಒಂದು ಕೆಲಸ ಮಾಡಲು ಸೂಚನೆ – ರಾಜ್ಯದ ಎಲ್ಲಾ ಶಾಲೆಗಳಿಗೆ ಖಡಕ್ ಸಂದೇಶ ನೀಡಿದ ಇಲಾಖೆ…..

Suddi Sante Desk
ಸೆಪ್ಟಂಬರ್ 15 ರಂದು ಶಾಲೆಗಳಲ್ಲಿ ತಪ್ಪದೇ ಈ ಒಂದು ಕೆಲಸ ಮಾಡಲು ಸೂಚನೆ – ರಾಜ್ಯದ ಎಲ್ಲಾ ಶಾಲೆಗಳಿಗೆ ಖಡಕ್ ಸಂದೇಶ ನೀಡಿದ ಇಲಾಖೆ…..

ಬೆಂಗಳೂರು

ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯ ಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ಆದೇಶಿಸಲಾಗಿದೆ.

ಉಲ್ಲೇಖಿತ (4) ರ ಆದೇಶದಲ್ಲಿ ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಮಂತ್ರಾಲಯ ವಿಧಾಯಿ ಇಲಾಖೆ ಪ್ರಕಟಿಸಿರುವ ಸಂವಿಧಾನ ಪೀಠಿಕೆಯ ಕನ್ನಡ ಮತ್ತು ಆಂಗ್ಲ ಭಾಷೆಯ ಆವೃತ್ತಿಯನ್ನು ಬಳಸಿಕೊಳ್ಳುವ ಸಂಬಂಧ ಪೀಠಿಕೆ ಮಾದರಿಯನ್ನು ನೀಡಲಾಗಿದೆ. ಉಲ್ಲೇಖಿತ (2) ರ ಈ ಕಛೇರಿಯ ಸುತ್ತೋಲೆ ಯಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿ ಗಳು ಪ್ರತಿ ದಿನ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಓದುವ ಕುರಿತು ಅಗತ್ಯ ಕ್ರಮವಹಿ ಸಲು ಸೂಚಿಸಲಾಗಿದೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರುಗಳು ಅಂತರ ರಾಷ್ಟ್ರೀಯ ಪುಜಾಪು ಭುತ್ವ ದಿನಾಚರಣೆ ಅಂಗವಾಗಿ ದಿನಾಂಕ 15.09.2023 ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಮುಂಭಾಗದ ವಿಶಾಲವಾದ ಮೆಟ್ಟಿಲುಗಳು ಮತ್ತು ಪ್ರದೇಶದಲ್ಲಿ 10,000 ವಿದ್ಯಾರ್ಥಿಗಳೊಡನೆ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.