ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ ಘಟಕದ ಕಾರ್ಯಕಾರಣಿ ಸಭೆ – ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಉದ್ಘಾಟನೆ ಸರ್ವರಿಗೂ ಆಮಂತ್ರಣ ನೀಡಿದ್ದಾರೆ ಡಾ.ಲತಾ.ಎಸ್.ಮುಳ್ಳೂರ…..

Suddi Sante Desk
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ ಘಟಕದ ಕಾರ್ಯಕಾರಣಿ ಸಭೆ – ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಉದ್ಘಾಟನೆ ಸರ್ವರಿಗೂ ಆಮಂತ್ರಣ ನೀಡಿದ್ದಾರೆ ಡಾ.ಲತಾ.ಎಸ್.ಮುಳ್ಳೂರ…..

ಬೆಂಗಳೂರು

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ. ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭ ನಡೆಯಲಿದೆ.ಆತ್ಮೀಯ ಪದಾಧಿ ಕಾರಿಗಳೇ ದಿ.09.10.2023 ರಂದು ಮುಂಜಾನೆ 11 ಗಂಟೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಕಬ್ಬನ್ ಪಾರ್ಕ ಬೆಂಗಳೂರು ಇಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಇದೆ ಈ ಒಂದು ಮಹತ್ವದ ಕಾರ್ಯಕಾರಣಿಯಲ್ಲಿ ಹಲವಾರು ವಿಚಾರ ಗಳ ಕುರಿತು ಚಿಂತನದೊಂದಿಗೆ ಮಹತ್ವದ ಚರ್ಚೆ ಗಳು ಕೂಡಾ ನಡೆಯಲಿವೆ.

ಮಧ್ಯಾಹ್ನ 3.00 ಗಂಟೆಗೆ ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯವಾದ ನಂತರ ನಮ್ಮ ಹೆಮ್ಮೆಯ ಸಂಘದ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರ ಹಣ ಕೂಡಾ ನಡೆಯಲಿದೆ ಎಂದು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್. ಮುಳ್ಳೂರ ಹೇಳಿದ್ದಾರೆ

ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಒಂದು ಕಾರ್ಯಕ್ರಮಕ್ಕೆ ಎಲ್ಲರೂ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಬೇಕು ಎಂದು ಡಾ ಲತಾ ಎಸ್ ಮುಳ್ಳುರ ಕರೆ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.