This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

international News

ಶಿಕ್ಷಕ ದಂಪತಿ ಆತ್ಮಹತ್ಯೆ – ಕರೋನ ದಿಂದ ಹೆಚ್ಚಾದ ಸಾಲ- ಈ ಒಂದು ಸಾಲದ ಹೊರೆಯಿಂದ ಆತ್ಮಹತ್ಯೆ

WhatsApp Group Join Now
Telegram Group Join Now

ವಿಜಯವಾಡ

ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿಗಳು ಅತಿಯಾದ ಸಾಲ ಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂ ಡ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ‌‌.ಹೌದು ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ ಪ್ರೀತಿ ಪಾತ್ರದವರಿಗೆ ಗುಡ್ ಬೈ ಹೇಳಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರನ್ನು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿ ಒಳಗಡೆ ಕುಳಿತು ಕಣ್ಣೀರಿಡುತ್ತಾ ತಮ್ಮ ಪ್ರೀತಿ ಪಾತ್ರದವರಿಗೆ ಕೊನೆಯ ಸಾಲುಗಳನ್ನು ಹೇಳುತ್ತಿರುವ ದೃಶ್ಯವಿದೆ. ಆರ್ಥಿಕ ಸಂಕಷ್ಟದಿಂದ ದಂಪತಿ ಈ ಆತುರದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.ಅಟ್ಮಕರ್ ಮಂಡಲದ ಕರಿವೇನಾ ಗ್ರಾಮದಲ್ಲಿ ನಡೆದಿದೆ. ಕಾರ್ನತಿ ಸುಬ್ರಮಣ್ಯಂ(33) ಮತ್ತು ಆತನ ಪತ್ನಿ ರೋಹಿಣಿ (27) ಎಂದು ಗುರುತಿಸಲಾಗಿದೆ.ದಂಪತಿ ಬಹಳ ಉತ್ಸಾಹದಿಂದಲೇ ಜೀವನ ನಡೆಸುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಕೋಯ್ಲಕುಂಟ್ಲದಲ್ಲಿ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ತೆರೆದಿದ್ದರು ಆದರೆ, ಕರೊನಾ ಕಾರಣದಿಂದಾಗಿ ಮಕ್ಕಳು ಪಾಲಕರು ಶಾಲಾ ಶುಲ್ಕವನ್ನು ಕಟ್ಟಲು ಆಗಲಿಲ್ಲ.ಇತ್ತ ಶಾಲೆ ಆರಂಭಿಸಲು ಮಾಡಿದ್ದ ಸಾಲದ ಬಡ್ಡಿ ಮತ್ತು ಇಎಂಐ ಕಟ್ಟುವುದೇ ದಂಪತಿಗೆ ಚಿಂತೆ ಯಾಗಿತ್ತು.ಪೊಲೀಸ್ ಮೂಲಗಳ ಪ್ರಕಾರ ದಂಪತಿ ಶಾಲೆಯ ಮೂಲಸೌಕರ್ಯ ಹೆಚ್ಚಿಸಲು ಸುಮಾರು 1.5 ರಿಂದ 2 ಕೋಟಿ ರೂಪಾಯಿ ಸಾಲ ಪಡೆದಿದ್ದರು

ಇನ್ನೂ ಈ ಒಂದು ವಿಚಾತ ಕುರಿತು ಇನ್ಸ್ಪೆಕ್ಟರ್ ನಾರಾಯಣ ರೆಡ್ಡಿ ಮಾತನಾಡಿ ದಂಪತಿ ಎಂಟು ವರ್ಷಗಳ ಹಿಂದೆ ಮದುವೆ ಆಗಿದ್ದರು.ಶಾಲೆಯನ್ನು ಸ್ಥಾಪಿಸಿ ಅದನ್ನು ನಿರ್ವಹಣೆ ಮಾಡಲು ಸುಮಾರು 1.5 ರಿಂದ 2 ಕೋಟಿ ರೂ. ಸಾಲ ಮಾಡಿದ್ದರು. ಆದರೆ ಕರೊನಾದಿಂದಾಗಿ ಶಾಲೆಗಳು ಮುಚ್ಚಿದ್ದರಿಂದ ಸಾಲದ ಬಡ್ಡಿ ಹೆಚ್ಚಾಗಿ ಕೊನೆಗೆ ಸಾಲ ತೀರಿಸಲಾ ಗದೇ ದಂಪತಿ ಹೆದರಿದ್ದಾರೆ.ಆಗಸ್ಟ್ 16 ರಂದು ರೋಹಿಣಿ ತನ್ನ ಪತಿಯ ಜೊತೆಗೆ ತವರಿಗೆ ಹೋಗಿ ಅವರೊಂದಿಗೆ ಸ್ವಲ್ಪ ಸಮಯ ಕಳೆದು ಇಬ್ಬರು ಸಂಜೆ ಮನೆಗೆ ಮರಳಿದ್ದಾರೆ.

ದಂಪತಿ ಮಾರ್ಗ ಮಧ್ಯೆ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಕಾರು ನಿಲ್ಲಿಸಿ ಕೊನೆಯ ಸಂದೇಶದ ವಿಡಿಯೋ ರೆಕಾರ್ಡ್ ಮಾಡಿ ದಂಪತಿ ಕಣ್ಣೀರಿಡುತ್ತಲೇ ಬದುಕಿಗೆ ವಿದಾಯ ಹೇಳಿದ್ದಾರೆ. ವಿಡಿಯೋ ನೋಡಿದ ಕುಟುಂಬಸ್ಥರು ಅವರನ್ನು ಹುಡುಕಿಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದಾದರೂ ಇಬ್ಬರು ಮಾರ್ಗ ಮಧ್ಯೆಯೇ ಅಸುನೀಗಿದ್ದಾರೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk