ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯೋಪಾಧ್ಯಯ – ಪ್ರವೇಶ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಶಂಕರ್ ಟ್ರ್ಯಾಪ್…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯೋಪಾಧ್ಯಯ – ಪ್ರವೇಶ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಶಂಕರ್ ಟ್ರ್ಯಾಪ್…..

ಬೀದರ್

ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯೋಪಾ ಧ್ಯಯ – ಪ್ರವೇಶ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಶಂಕರ್ ಟ್ರ್ಯಾಪ್

ಹೌದು ವಸತಿ ಶಾಲೆಯೊಂದಕ್ಕೆ ಪ್ರವೇಶ ನೀಡುವ ವಿಚಾರ ಕುರಿತಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಖ್ಯೋಪಾಧ್ಯಯರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ ನಲ್ಲಿ ನಡೆದಿದೆ.

25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಶಂಕರ್ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದಲ್ಲಿ ಈ ಒಂದು ದಾಳಿ ನಡೆದಿದೆ.

ನಾಗಶೆಟ್ಟಿ ಎಂಬುವರ ಮಗನಿಗೆ ವಸತಿ ಶಾಲೆಗೆ ಪ್ರವೇಶ ಕೊಡಲು ಶಂಕರ್ ಅವರು ಹಣ ಇಟ್ಟಿ ದ್ದರು ಈ ಬಗ್ಗೆ ನಾಗಶೆಟ್ಟಿ ಅವರು ಲೋಕಾಯು ಕ್ತರಿಗೆ ದೂರನ್ನು ನೀಡಿದ್ದರು ದೂರಿನ ಅನ್ವಯ ಲೋಕಾಯುಕ್ತ ಡಿವೈಎಸ್‌ಪಿ ಓಲೇಕಾರ್ ನೇತೃತ್ವ ದಲ್ಲಿ ಕಾರ್ಯಾಚರಣೆ ನಡೆಸಿ ಶಂಕರ್ ಅವರನ್ನು ರೆಡ್‌ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ ಸಧ್ಯ ವಶಕ್ಕೆ ತಗೆದುಕೊಂಡಿದ್ದು ವಿಚಾರಣೆ ಮಾಡುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೀದರ್

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.