ಒಂದೇ ಜಿಲ್ಲೆಯ 28 ಕಡೆಗಳಲ್ಲಿ ಲೋಕಾಯುಕ್ತ ದಾಳಿ – ಲೋಕಾಯುಕ್ತ ದಾಳಿಯಿಂದ ಬೆಚ್ಚಿಬಿದ್ದ ಸರ್ಕಾರಿ ಅಧಿಕಾರಿ ಸಿಬ್ಬಂದಿ…..

Suddi Sante Desk
ಒಂದೇ ಜಿಲ್ಲೆಯ 28 ಕಡೆಗಳಲ್ಲಿ ಲೋಕಾಯುಕ್ತ ದಾಳಿ – ಲೋಕಾಯುಕ್ತ ದಾಳಿಯಿಂದ ಬೆಚ್ಚಿಬಿದ್ದ ಸರ್ಕಾರಿ ಅಧಿಕಾರಿ ಸಿಬ್ಬಂದಿ…..

ಬೆಂಗಳೂರು

ಒಂದೇ ಜಿಲ್ಲೆಯ 28 ಕಡೆಗಳಲ್ಲಿ ಲೋಕಾಯುಕ್ತ ದಾಳಿ – ಲೋಕಾಯುಕ್ತ ದಾಳಿಯಿಂದ ಬೆಚ್ಚಿಬಿದ್ದ ಸರ್ಕಾರಿ ಅಧಿಕಾರಿ ಸಿಬ್ಬಂದಿ ಹೌದು ಇಂಥಹ ದೊಂದು ದೊಡ್ಡ ಪ್ರಮಾಣದಲ್ಲಿ ಲೋಕಾಯುಕ್ತ ದಾಳಿಯೊಂದು ನಡೆದ ಘಟನೆ ಬೆಂಗಳೂರು ನಗರ ಜಿಲ್ಲೆಯಲ್ಲಿ ನಡೆದಿದೆ

ಜಿಲ್ಲೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಇಂದು ಸಂಜೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಭ್ರಷ್ಟ ಅಧಿಕಾರಿಗಳ ಚಳಿ ಯನ್ನು ಬಿಡಿಸುತ್ತಿರುವ ಲೋಕಾಯುಕ್ತ ಪೊಲೀಸರು ಇದೀಗ ಬೆಂಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ದಾಳಿಯನ್ನು ಮಾಡಿದ್ದಾರೆ.

ಪದ್ಮನಾಭನಗರ, ಜಯನಗರ, ವಿಜಯನಗರ, ಬಸವನಗುಡಿ, ಬ್ಯಾಟರಾಯನಪುರ, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ ಕೆ.ಆರ್.ಪುರಂ ಸೇರಿದಂತೆ ಒಟ್ಟು 28 ಕಡೆಗಳಲ್ಲಿ ಇಧರೊಂದಿಗೆ ಆರ್‌ಒ, ಎಆರ್‌ಒ, ಎಡಿಟಿಪಿ ಅಧಿಕಾರಿಗಳ ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾ ಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ, ತಪಾಸಣೆ ನಡೆಸಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿಯ ದಾಖಲೆ ಸೇರಿದಂತೆ ಹಲವಾರು ವಸ್ತುಗಳನ್ನು ವಶಕ್ಕೆ ತಗೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.