ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು – ನವಂಬರ್ 23 ರಿಂದ ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಶಿಕ್ಷಣದ ಜೊತೆಯಲ್ಲಿ ಸಿಗಲಿದೆ ಈ ವಸ್ತುಗಳು…..

Suddi Sante Desk
ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು – ನವಂಬರ್ 23 ರಿಂದ ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಶಿಕ್ಷಣದ ಜೊತೆಯಲ್ಲಿ ಸಿಗಲಿದೆ ಈ ವಸ್ತುಗಳು…..

ಶಿವಮೊಗ್ಗ

ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು – ನವಂಬರ್ 23 ರಿಂದ ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿ ಗಳಿಗೆ ಶಾಲೆಗಳಲ್ಲಿ ಶಿಕ್ಷಣದ ಜೊತೆಯಲ್ಲಿ ಸಿಗಲಿದೆ ಈ ವಸ್ತುಗಳು ಹೌದು…..

ರಾಜ್ಯದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ನೀಡಿದ್ದಾರೆ.ಹೌದು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿಸುದ್ದಿಯೊಂದನ್ನು ಸಚಿವರು ನೀಡಿದ್ದು ನವೆಂಬರ್ 23 ರಿಂದ ಮೊಟ್ಟೆ ಜೊತೆಗೆ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರ ನೀಡೋದಕ್ಕೆ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ನಗರದಲ್ಲಿ ಮಾತನಾಡಿದ ಅವರು ರಾಜ್ಯದ ಸರ್ಕಾರಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಆಹಾರವನ್ನು ಶಾಲೆಗಳಲ್ಲಿ ನೀಡಬೇಕು ಎಂಬುದು ಸಿಎಂ ಸಿದ್ಧರಾಮಯ್ಯ ಅವರ ಸೂಚನೆಯಾಗಿದೆ.
ಅದರಂತೆ ಕ್ರಮವಹಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನೀರಿನ ಹಾಹಾಕಾರ ಉಂಟಾಗುವ ಸಾಧ್ಯತೆ ಇದ್ದು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೊಳ್ಳಲಾ ಗುತ್ತಿದೆ ಅಂತ ಹೇಳಿದರು.ಅಂದಹಾಗೇ ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಈಗಾಗಲೇ ಮೊಟ್ಟೆ ನೀಡಲಾಗುತ್ತಿತ್ತು ವಾರಕ್ಕೆ ಒಂದು ಕೊಡುತ್ತಿದ್ದಂತ ಮೊಟ್ಟೆಯನ್ನು ಎರಡು ಮಾಡಲಾಗಿದೆ.

ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುತ್ತಿದೆ. ಇದರ ಜೊತೆಗೆ ನವೆಂಬರ್.23ರಿಂದ ವಿಶೇಷ ಪೌಷ್ಠಿಕಾಂಶವುಳ್ಳ ಆಹಾರವನ್ನು ಕೂಡ ಸರ್ಕಾರಿ ಶಾಲಾ ಮಕ್ಕಳಿಗೆ ನೀಡಲಿದೆ. ಈ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿಯನ್ನು ನೀಡಿದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.