ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರ ಜ್ಯೇಷ್ಠತೆಯ ಸಮಸ್ಯೆ ಕುರಿತು ಶಿಕ್ಷಣ ಸಚಿವರೊಂದಿಗೆ KSPSTA ಟೀಮ್ ಸಭೆ – ಪ್ರಮುಖ ಸಮಸ್ಯೆಗಳ ಕುರಿತು ಸಚಿವರೊಂದಿಗೆ ಚರ್ಚೆ ಮಾಡಿದ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿನ ಟೀಮ್…..

Suddi Sante Desk
ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರ ಜ್ಯೇಷ್ಠತೆಯ ಸಮಸ್ಯೆ ಕುರಿತು ಶಿಕ್ಷಣ ಸಚಿವರೊಂದಿಗೆ KSPSTA ಟೀಮ್ ಸಭೆ – ಪ್ರಮುಖ ಸಮಸ್ಯೆಗಳ ಕುರಿತು ಸಚಿವರೊಂದಿಗೆ ಚರ್ಚೆ ಮಾಡಿದ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿನ ಟೀಮ್…..

ಬೆಂಗಳೂರು

ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರ ಜ್ಯೇಷ್ಠತೆಯ ಸಮಸ್ಯೆ ಸೇರಿದಂತೆ ಇನ್ನಿತರ ಪ್ರಮುಖ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಬಗೆಹರಿಸ ಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜ್ಯ ಶಿಕ್ಷಕರ ಸಂಘಕ್ಕೆ ಭರವಸೆ ನೀಡಿದ್ದಾರೆ.

ಈ ಮೂಲಕ ಶೈಕ್ಷಣಿಕ ವಲಯದ ಹಲವು ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಸಮಗ್ರ ಶಿಕ್ಷಣ ಕಚೇರಿ ಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಸಭೆ ನಡೆಸಿ, ಸುದೀರ್ಘ ವಾಗಿ ಚರ್ಚೆ ನಡೆಸಿದರು.

ಇದೇ ವೇಳೆ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಹಾಗೂ ನೀರು ನೀಡುವ ಸರ್ಕಾರದ ಕ್ರಮಕ್ಕೆ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಕೆ.ನಾಗೇಶ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ಚಂದ್ರಶೇಖರ ನುಗ್ಗಲಿ ಅವರು ಅಭಿನಂ ದನೆ ಸಲ್ಲಿಸಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.