ಮೋದಿ ಅವರ ಹೆಸರು ತೆಗೆದುಕೊಂಡು ಬಯ್ಯದೇ ಇದ್ದಲ್ಲಿ ಸಿದ್ದರಾಮಯ್ಯಗೆ ಊಟ ರಚಿಸುವುದಿಲ್ಲ ಪ್ರಹ್ಲಾದ್ ಜೋಶಿ ಲೇವಡಿ – ಟಗರಿಗೆ ಗುದ್ದಿದ ಕರ್ನಾಟಕ ಚಾಣಕ್ಯ ಪ್ರಹ್ಲಾದ್ ಜೋಶಿ…..

Suddi Sante Desk
ಮೋದಿ ಅವರ ಹೆಸರು ತೆಗೆದುಕೊಂಡು ಬಯ್ಯದೇ ಇದ್ದಲ್ಲಿ ಸಿದ್ದರಾಮಯ್ಯಗೆ ಊಟ ರಚಿಸುವುದಿಲ್ಲ ಪ್ರಹ್ಲಾದ್ ಜೋಶಿ ಲೇವಡಿ – ಟಗರಿಗೆ ಗುದ್ದಿದ ಕರ್ನಾಟಕ ಚಾಣಕ್ಯ ಪ್ರಹ್ಲಾದ್ ಜೋಶಿ…..

ಹುಬ್ಬಳ್ಳಿ

ಮೋದಿ ಅವರ ಹೆಸರು ತೆಗೆದುಕೊಂಡು ಬಯ್ಯದೇ ಇದ್ದಲ್ಲಿ ಸಿದ್ದರಾಮಯ್ಯಗೆ ಊಟ ರಚಿಸುವುದಿಲ್ಲ ಪ್ರಹ್ಲಾದ್ ಜೋಶಿ ಲೇವಡಿ – ಟಗರಿಗೆ ಗುದ್ದಿದ ಕರ್ನಾಟಕ ಚಾಣಕ್ಯ ಪ್ರಹ್ಲಾದ್ ಜೋಶಿ ಹೌದು ಮೋದಿ ಅವರ ಹೆಸರು ತೆಗೆದು ಕೊಂಡು ಅವರಿಗೆ ಬಯ್ಯದೇ ಇದ್ದಲ್ಲಿ ಸಿದ್ದರಾಮ ಯ್ಯಗೆ ಊಟ ರಚಿಸುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಯತ್ನಾಳ್ ಅವರು ತನ್ವೀರ್ ಕುರಿತು ಯಾವ ಕಾರಣದಿಂದ ಹೇಳಿದ್ದಾರೆ ಅನ್ನೋದು ಮುಖ್ಯ.ಯತ್ನಾಳ್ ಮಾಡಿರುವ ಗಂಭೀರ ಆರೋಪಕ್ಕೆ ಸಿಎಂ ಸ್ಪಷ್ಟನೆ ಕೊಡಬೇಕು.ನೀವು ಅಲ್ಲಿಗೆ ಹೋಗಬಾರದು ಅಂತ ಸಿಎಂಗೆ ಪೊಲೀಸರು ಹೇಳಿದ್ದಾಗಿ ಯತ್ನಾಳ ಆರೋಪಿಸಿದ್ದಾರೆ.ಪ್ರಧಾನಿಗಳು ಭೇಟಿಯಾದ ಕಾರ್ಯಕ್ರಮದಲ್ಲಿ ತನ್ವೀರ್ ಭಾಗಿಯಾಗಿರುವ ಫೋಟೋ ಹಾಕಿದ್ದಾರೆ.ಅದು ಸರಿ ಇದ್ದರೂ ಇರಬಹುದು.

ಆ ಸಂದರ್ಭದಲ್ಲಿ ತನ್ವೀರ್ ಗೆ ಐಸಿಎಸ್ ನಂಟು ಇತ್ತು ಇಲ್ಲವೋ ಗೊತ್ತಿಲ್ಲ.ಈಗ ತನ್ವೀರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ ಎಂದರು. ಇನ್ನೂ ತನಿಖಾ ಸಂಸ್ಥೆಗಳು ಏನು ಹೇಳುತ್ತೋ ಅದನ್ನು ನಾವು ಪರಿಗಣಿಸಬೇಕು. ಸಿದ್ದರಾಮ ಯ್ಯನವರು ಈ ರೀತಿ ಬಾಲಿಷ ಹೇಳಿಕೆ ಕೊಡೋದು ಅವರ ವ್ಯಕ್ತಿತ್ವಕ್ಕೆ ಶೋಭೆ ತರಲ್ಲ

ಸಿದ್ದರಾಮಯ್ಯ ಜವಾಬ್ದಾರಿಯಿಂದ ಮಾತ ನಾಡುವುದನ್ನು ಕಲಿಯಲಿ ಎಂದು ಕಿವಿಮಾತು ನೀಡುತ್ತಾ ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುದ್ದಿದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.