ಕಾಂಗ್ರೇಸ್ ಪಕ್ಷದ ನಾಯಕನ ಮಗ ಕೊಲೆ – ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಗೆಳೆಯರು…..

Suddi Sante Desk
ಕಾಂಗ್ರೇಸ್ ಪಕ್ಷದ ನಾಯಕನ ಮಗ ಕೊಲೆ – ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಗೆಳೆಯರು…..

ಕಲಬುರಗಿ

ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ.ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಈ ಒಂದು ಕೊಲೆ ನಡೆದಿದೆ.ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆಯನ್ನು ಮಾಡಿ ಕೊಲೆಯನ್ನು ಮಾಡಲಾಗಿದೆ

ಚಂದ್ರಶೇಖರ್ ಚೌಲ್ (21) ಕೊಲೆಯಾದ ದುರ್ದೈವಿಯಾಗಿದ್ದು ಈತ ಶಾಸಕ ಬಿ.ಆರ್. ಪಾಟೀಲ್ ಆಪ್ತ, ಕಾಂಗ್ರೆಸ್ ಮುಖಂಡ ಬಸವ ರಾಜ್ ಚೌಲ್ ಮಗನಾಗಿದ್ದಾನೆ.ಆತನ ಸ್ನೇಹಿತ ರಿಂದಲೇ ಕೊಲೆ ನಡೆದಿರುವ ಶಂಕೆಯನ್ನು  ಪೊಲೀಸರು ವ್ಯಕ್ತಪಡಿಸಿದ್ದಾರೆ.

ಕೊಲೆಗೆ ಕಾರಣ ಸದ್ಯ ನಿಗೂಢವಾಗಿದ್ದು ಆಳಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಆಳಂದ ಪೊಲೀಸರು.

ಸುದ್ದಿ ಸಂತೆ ನ್ಯೂಸ್ ಕಲಬುರಗಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.