ಧಾರವಾಡ –
ಧಾರವಾಡದ 16ನೇ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ವರಿ ಸಾಲಗಟ್ಟಿ ಪರ ಗೆಲುವಿನ ಅಲೆ ಕಂಡು ಬರತ್ತಿದೆ.ಹೌದು ಈ ಹಿಂದೆ ಪಕ್ಷದಲ್ಲಿದ್ದು ಕೊಂಡು ಅಧಿಕಾರದಲ್ಲಿ ಇರದಿದ್ದರೂ ಕೂಡಾ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಕಾರ್ಯಗಳನ್ನು ಮಾಡಿದ ಇವರಿಗೆ ವಾರ್ಡ್ ನಲ್ಲಿ ಮತದಾರರು ಉತ್ತಮವಾದ ಸ್ಪಂದನೆ ನೀಡಿದ್ದಾರೆ.

ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕೂಡಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಮತ್ತು ಸಂಸದರು ಕೇಂದ್ರದ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನವನ್ನು ತಗೆದುಕೊಂಡು ಬಂದು ಅಭಿವೃದ್ದಿ ಯನ್ನು ಮಾಡಿರುವ ಇವರು ಈಗ ವಾರ್ಡ್ ನ ಜನತೆಯ ಸೇವೆಗೆ ಮುಂದಾಗಿದ್ದಾರೆ.

ಹೀಗಾಗಿ ಸಧ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಯನ್ನ ಮಾಡಿದ್ದಾರೆ.ಅಖಾಡಕ್ಕೆ ಇಳಿದಾಗಿನಿಂದ ಸಂತಸ ಗೊಂಡಿರುವ ವಾರ್ಡ್ ನ ಜನರು ಮತದಾರರು ಈಗ ರಾಜೇಶ್ವರಿ ಸಾಲಗಟ್ಟಿ ಪರ ಧ್ವನಿಯಾಗಿ ನಿಂತು ಕೊಂಡಿದ್ದಾರೆ.

ನಾಮಪತ್ರ ಸಲ್ಲಿಸಿ ಪ್ರಚಾರ ಕೈಗೊಂಡ ಇವರಿಗೆ ಆರಂಭದಿಂದಲೂ ಗೆಲುವಿನ ಮಾತುಗಳನ್ನು ಹೇಳುತ್ತಿರುವ ಮತದಾರರು ಬದಲಾವಣೆ ಬಯಸಿದ್ದೇವೆ ಅದು ನಿಮ್ಮಿಂದಾಗಲಿ ಎನ್ನುತ್ತಿದ್ದಾರೆ. ಹೀಗಾಗಿ ವಾರ್ಡ್ ನಲ್ಲಿ ಸಧ್ಯ ಬಿಜೆಪಿ ಪರ ಅಲೆ ಜೋರಾಗಿ ಕೇಳಿ ಬರುತ್ತಿದ್ದು ಹೊಸ ಕನಸು ಹೊಸ ಅಭಿವೃದ್ದಿಯ ಯೋಜನೆಗಳೊಂದಿಗೆ ಸ್ಪರ್ಧೆ ಮಾಡಿರುವ ಇವರಿಗೆ ವಾರ್ಡ್ ನಲ್ಲಿ ಮತದಾರರು ಜೈ ಜೈ ಎನ್ನುತ್ತಿದ್ದು ಈ ಬಾರಿ ವಾರ್ಡ್ ನಲ್ಲಿ ನಿಮ್ಮದೇ ಗೆಲುವು ನಿವೇ ನಮಗೆ ಬಾಸ್ ಎನ್ನುತ್ತಾ ಗೆಲುವಿನ ಮಾತುಗಳನ್ನು ಹೇಳಿ ಆಶೀರ್ವಾದವನ್ನು ಮಾಡುತ್ತಿದ್ದಾರೆ.

ಹೀಗಾಗಿ ವಾರ್ಡ್ ನಲ್ಲಿ ರಾಜೇಶ್ವರಿ ಸಾಲಗಟ್ಟಿ ಯವರು ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ. ಬಿಡುವಿಲ್ಲದೇ ಅಬ್ಬರದ ಪ್ರಚಾರವನ್ನು ಮಾಡುತ್ತಿ ದ್ದಾರೆ. ಕೇಂದ್ರದಲ್ಲಿ ನಮ್ಮದೇ ಸರ್ಕಾರ ರಾಜ್ಯದಲ್ಲಿ ನಮ್ಮ ಸರ್ಕಾರ ಹೀಗಾಗಿ ಪಾಲವಿಕೆಯಲ್ಲೂ ನಾವೇ ಅಧಿಕಾರಕ್ಕೆ ಬಂದರೆ ಅನುಕೂಲವಾಗುತ್ತದೆ ಎಂದು ಕೊಂಡಿರುವ ಇವರು ಮತದಾರರಲ್ಲಿ ಅಭಿವೃದ್ದಿಯ ಕೆಲಸ ಕಾರ್ಯಗಳೊಂದಿಗೆ ಬಿಡುವಿಲ್ಲದೇ ಮತ ಯಾಚನೆಯಲ್ಲಿ ತೊಡಗಿದ್ದಾರೆ.
