ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ NPS ರದ್ದು ಕುರಿತು ಚರ್ಚೆ ಮಾಡಿ ನಿರ್ಧಾರ – ರಾಜ್ಯದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ರು ಸಿಹಿಸುದ್ದಿ…..

Suddi Sante Desk
ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ NPS ರದ್ದು ಕುರಿತು ಚರ್ಚೆ ಮಾಡಿ ನಿರ್ಧಾರ – ರಾಜ್ಯದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ರು ಸಿಹಿಸುದ್ದಿ…..

ಬೆಂಗಳೂರು

ಸಚಿವ ಸಂಪುಟದಲ್ಲಿ ಶೀಘ್ರದಲ್ಲೇ NPS ರದ್ದು ಕುರಿತು ಚರ್ಚೆ ಮಾಡಿ ನಿರ್ಧಾರ – ರಾಜ್ಯದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾ  ಮಯ್ಯ ನೀಡಿದ್ರು ಸಿಹಿಸುದ್ದಿ ಹೌದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಕುರಿತಂತೆ ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗುತ್ತದೆ.

ನಂತರ ಈ ಒಂದು ಕುರಿತಂತೆ ನಿರ್ಧಾರವನ್ನು ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾ ಮಯ್ಯ ಹೇಳಿದರು.ಬೆಂಗಳೂರಿನಲ್ಲಿ ಮಾತನಾ ಡಿದ ಅವರು ಈ ಒಂದು ಯೋಜನೆ ಕುರಿತಂತೆ ಎದುರಾಗುವ ಸಾಧಕಗಳ ಕುರಿತು ಬಾಧಕಗಳ ಬಗ್ಗೆ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಬಜೆಟ್‌ನಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದಿದ್ದಾರೆ.ರಾಜ್ಯ ಸರಕಾರಿ ನೌಕರ ಸಮುದಾ ಯದ ಪ್ರಮುಖ ಬೇಡಿಕೆಯಾಗಿರುವ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿ ಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

ನೌಕರರರ ಬೇಡಿಕೆಗಳಿಗೆ ಸರಕಾರ ಸಕಾರಾತ್ಮಕ ವಾಗಿ ಸ್ಪಂದಿಸುತ್ತಲೇ ಬಂದಿದೆ.ಸರಕಾರ ಜಾರಿ ಮಾಡುತ್ತಿರುವ ಐದು ‘ಗ್ಯಾರಂಟಿ’ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ತಲುಪಿಸಲು ನೌಕರ ಸಮುದಾಯ ಬದ್ಧತೆ ಮತ್ತು ಪ್ರಾಮಾಣಿಕ ವಾಗಿ ಕೆಲಸ ಮಾಡಬೇಕು ಎಂದರು.ರಾಜ್ಯದಲ್ಲಿ 2006ರ ಏಪ್ರಿಲ್‌ 1ರಿಂದ ಹೊಸ ಪಿಂಚಣಿ ಯೋಜನೆ ಜಾರಿಗೆ ಬಂದಿದ್ದು ಸುಮಾರು 2.98 ಲಕ್ಷ ಸರಕಾರಿ ನೌಕರರು ಎನ್‌ಪಿಎಸ್‌ ವ್ಯಾಪ್ತಿ ಯಲ್ಲಿದ್ದಾರೆ.

ನಿಶ್ಚಿತ ಮೊತ್ತದ ಪಿಂಚಣಿ ಖಾತರಿ ಇಲ್ಲದ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ನಿವೃತ್ತಿ ಬದುಕಿಗೆ ಆರ್ಥಿಕ ಭದ್ರತೆ ಖಾತರಿಗಾಗಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕು ಎಂಬುದು ನೌಕರ ಸಮುದಾಯದ ಬೇಡಿಕೆ ಯಾಗಿದ್ದು ರಾಜ್ಯ ಸರ್ಕಾರ ಸಚಿವ ಸಂಪುಟದ ಸಭೆಯಲ್ಲಿ ಏನೇನು ತೀರ್ಮಾನವಾಗಲಿದೆ ಎಂಬೊದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.