ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ ಮಾಡಿದ ರಾಜ್ಯ ಸರ್ಕಾರ – ಮೂವರು IAS ಅಧಿಕಾರಿಗಳ ವರ್ಗಾವಣೆ…..

Suddi Sante Desk
ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ ಮಾಡಿದ ರಾಜ್ಯ ಸರ್ಕಾರ – ಮೂವರು IAS ಅಧಿಕಾರಿಗಳ ವರ್ಗಾವಣೆ…..

ಬೆಂಗಳೂರು

ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ ಮಾಡಿದ ರಾಜ್ಯ ಸರ್ಕಾರ – ಮೂವರು IAS ಅಧಿಕಾರಿಗಳ ವರ್ಗಾವಣೆ ಹೌದು ರಾಜ್ಯದಲ್ಲಿ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು ಮತ್ತೆ ಮೂವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಹೌದು ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿಯನ್ನು ಮಾಡಿದ್ದು ಮೂವರು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲು ವಾಗಿ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ಶ್ರೀಕರ್ ಎಂ.ಎಸ್ ಐಎಎಸ್ (ಕೆ.ಎನ್: 1999), ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ), ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಿದೆ.

ಈ ಹುದ್ದೆಯಲ್ಲಿದ್ದಂತ ಉಮಾಶಂಕರ್ ಎಸ್.ಆರ್ ಅವರನ್ನು ಬಿಡುಗಡೆಗೊಳಿಸಿದೆ. ಇನ್ನೂ ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಆಯುಕ್ತರಾದ ಕನಕ ವಲ್ಲಿ ಎಂ.ಐಎಎಸ್ (ಕೆಎನ್: 2010) ಅವರನ್ನು ಬೆಂಗಳೂರಿನ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಹುದ್ದೆಗಾಗಿ ಕಾಯುತ್ತಿರುವ ಐಎಎಸ್ (ಕೆಎನ್: 2010) ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ ಅವರನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.