CM ಕೈ ಸೇರಿದ 545 PSI ನೇಮಕಾತಿಯ ಅಕ್ರಮದ ವರದಿ – ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಸೂಚನೆ ನೀಡಿದ್ದ ರಾಜ್ಯ ಸರ್ಕಾರ…..

Suddi Sante Desk
CM ಕೈ ಸೇರಿದ 545 PSI ನೇಮಕಾತಿಯ ಅಕ್ರಮದ ವರದಿ – ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಸೂಚನೆ ನೀಡಿದ್ದ ರಾಜ್ಯ ಸರ್ಕಾರ…..

ಬೆಂಗಳೂರು

CM ಕೈ ಸೇರಿದ 545 PSI ನೇಮಕಾತಿಯ ಅಕ್ರಮದ ವರದಿ – ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಸೂಚನೆ ನೀಡಿದ್ದ ರಾಜ್ಯ ಸರ್ಕಾರ ಹೌದು ರಾಜ್ಯದಲ್ಲಿ ನಡೆದ 545 ಪಿಎಸ್ ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಅದರಂತೆ ತನಿಖೆ ನಡೆಸಿರುವ ಸಮಿತಿಯು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮ ಯ್ಯ ಅವರಿಗೆ ತನಿಖಾ ವರದಿಯನ್ನು ನೀಡಿದೆ.ಈ ವೇಳೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಎಂ ರಾಜಕೀಯ ಕಾರ್ಯ ದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ 545 PSI ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು.ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಕರಣದ ಮರು ತನಿಖೆ ಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.