SSLC ವಿದ್ಯಾರ್ಥಿ ಆತ್ಮಹತ್ಯೆ – ಪರೀಕ್ಷಾ ಆರಂಭವಾಗುತ್ತಿದ್ದಂತೆ ಭಯಗೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಪರಶುರಾಮ್…..

Suddi Sante Desk
SSLC ವಿದ್ಯಾರ್ಥಿ ಆತ್ಮಹತ್ಯೆ – ಪರೀಕ್ಷಾ ಆರಂಭವಾಗುತ್ತಿದ್ದಂತೆ ಭಯಗೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಪರಶುರಾಮ್…..

ಶಿವಮೊಗ್ಗ

SSLC ವಿದ್ಯಾರ್ಥಿ ಆತ್ಮಹತ್ಯೆ – ಪರೀಕ್ಷಾ ಆರಂಭವಾಗುತ್ತಿದ್ದಂತೆ ಭಯಗೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಪರಶುರಾಮ್

SSLC ವಿದ್ಯಾರ್ಥಿಯೊರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ.ಪರೀಕ್ಷೆ ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಆನಂದಪುರದ ಕೆಪಿಎಸ್ಸಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ಪರಶು ರಾಮ್ ಚೆನ್ನಾಗಿಯೇ ಓದುತ್ತಿದ್ದ ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದರೆ ಕೊನೆಯ ಕ್ಷಣ ಭಯದಿಂದ ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ.

ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಧ್ಯ ಈ ಕುರಿತಂತೆ ದೂರನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.