ನಾಲ್ವರು ಶಿಕ್ಷಕರು ಅಮಾನತು – ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಮಾಡಿದ DDPI…..

Suddi Sante Desk
ನಾಲ್ವರು ಶಿಕ್ಷಕರು ಅಮಾನತು – ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಮಾಡಿದ DDPI…..

ಚಿತ್ರದುರ್ಗ

ನಾಲ್ವರು ಶಿಕ್ಷಕರು ಅಮಾನತು – ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಮಾಡಿದ DDPI ಹೌದು

ಕರ್ತವ್ಯ ಲೋಪ ಹಿನ್ನಲೆಯಲ್ಲಿ ನಾಲ್ವರು ಶಿಕ್ಷಕರು ಅಮಾನತುಗೊಂಡಿರುವ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ. ಡಿಡಿಪಿಐ ಅಮಾನತು ಮಾಡಿ ಆದೇಶವನ್ನು ಮಾಡಿದ್ದಾರೆ. 2023-24ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ ನಾಲ್ವರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ಆದೇಶಿಸಿದ್ದಾರೆ.

ಚಳ್ಳಕೆರೆ ತಾಲೂಕಿನ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ, ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ,ಪಿ. ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಮತ್ತು ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡಿರುವ ಶಿಕ್ಷಕರಾಗಿದ್ದಾರೆ.

ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದು ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸು ತ್ತಿರುವುದು ಕಂಡು ಬಂದಿದೆ. ಹಾಗೂ ನಕಲು ಮಾಡುವುದನ್ನು ತಡೆಯದೆ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ,

ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪ ವೆಸಗಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿತ್ರದುರ್ಗ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.