Mla ವಿನಯ ಕುಲಕರ್ಣಿ ಗೆ ಶಾಕ್ ನೀಡಿದ ಹೈಕೋರ್ಟ್  ಅರ್ಜಿಯನ್ನು ವಜಾಗೊಳಿಸಿ ಮತ್ತೆ ಶಾಕ್ ನೀಡಿದ ಹೈಕೋರ್ಟ್…..

Suddi Sante Desk
Mla ವಿನಯ ಕುಲಕರ್ಣಿ ಗೆ ಶಾಕ್ ನೀಡಿದ ಹೈಕೋರ್ಟ್  ಅರ್ಜಿಯನ್ನು ವಜಾಗೊಳಿಸಿ ಮತ್ತೆ ಶಾಕ್ ನೀಡಿದ ಹೈಕೋರ್ಟ್…..

ಬೆಂಗಳೂರು

Mla ವಿನಯ ಕುಲಕರ್ಣಿ ಗೆ ಶಾಕ್ ನೀಡಿದ ಹೈಕೋರ್ಟ್  ಅರ್ಜಿಯನ್ನು ವಜಾಗೊಳಿಸಿ ಮತ್ತೆ ಶಾಕ್ ನೀಡಿದ ಹೈಕೋರ್ಟ್ ಹೌದು ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಶಾಕ್ ನೀಡಿದೆ ಹೈಕೋರ್ಟ್

ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯ ನಿಗದಿಪಡಿಸಿ ರುವ ದೋಷಾರೋಪ ಕೈಬಿಡು ವಂತೆ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.ಪ್ರಕರಣ ಸಂಬಂಧ ದೋಷಾರೋಪಣೆ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನ್ಯಾಯಪೀಠವು ತೀರ್ಪು ಪ್ರಕಟಿಸಿತು.

ಈ ಹಿಂದೆ ಅರ್ಜಿಗೆ ಸಂಬಂಧಿಸಿದಂತೆ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದೋಷಾರೋಪ ಪಟ್ಟಿಯಲ್ಲಿನ ಎಲ್ಲಾ ದಾಖಲೆ ಗಳನ್ನು ಆರೋಪಿಗೆ ಒದಗಿಸಿಲ್ಲ  ಪ್ರಕರಣದಲ್ಲಿ ಪ್ರಾಸಿಕ್ಯೂಷನ್, ಶಸ್ತ್ರಾಸ್ತ್ರ ಕಾಯ್ದೆ ೧೯೫೯ರ ಪ್ರಕಾರ ಮೊದಲ ಆರೋಪಿ ಬಸವರಾಜ ಮುತ್ತಗಿ ಮೇಲೆ ಮಾತ್ರವೇ ಪೂರ್ವಾನುಮತಿ ಪಡೆದಿದೆ.

ವಿನಯ್ ಕುಲಕರ್ಣಿ ಮೇಲೆ ಪಡೆದಿಲ್ಲ ವಿನಯ್ ಕುಲಕರ್ಣಿ ವಿರುದ್ಧ ವಿಶೇಷ ನ್ಯಾಯಾಲಯ ದೋಷಾರೋಪ ನಿಗದಿಪಡಿಸುವಾಗ ಶಸ್ತ್ರಾಸ್ತ್ರ ಕಾಯ್ದೆಯನ್ನೂ ಅಡಕಗೊಳಿಸಿರುವುದು ತಪ್ಪು ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ತಿಳಿಸಿದರು ಸಿಬಿಐ ಪರ ವಕೀಲರು, ಪ್ರಕರಣದಲ್ಲಿ ಅರ್ಜಿದಾರರ ಕೈವಾಡ ಇರುವುದು ಸಾಕ್ಷ್ಯಾಧಾರ ಗಳಿಂದ ನ್ಯಾಯಾಂಗ ಬಂದಿದೆ.

ಆದ್ದರಿಂದ ಅರ್ಜಿ ವಜಾಗೊಳಿಸಿ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ಮುಂದುವರಿಯಲು ಅವಕಾಶ ಕಲ್ಪಿಸಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ಪೀಠ, ತೀರ್ಪು ಕಾಯ್ದಿರಿಸಿತ್ತು.ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೨೦೧೬ರ ಜೂ. ೧೫ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಮತ್ತು ಬಿಜೆಪಿ ನಾಯಕ ಯೋಗೀಶ್‌ಗೌಡ ಮೇಲೆ ದುಷ್ಕರ್ಮಿ ಗಳು ದಾಳಿ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದರು.

ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.೨೧ ಆರೋಪಿಗಳ ವಿರುದ್ಧ ದೋಷಾ ರೋಪ ನಿಗದಿಪಡಿಸಿ ೨೦೨೪ರ ಜನವರಿ ೨೯ ರಿಂದ ಫೆಬ್ರುವರಿ ೧ರ ವರೆಗೆ ನಿಯಮಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಕೋರ್ಟ್ ಆದೇಶಿಸಿತ್ತು.

ಇದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ ಇನ್ನು ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ೨೦೨೦ರ ನವೆಂಬರ್‌ನಲ್ಲಿ ಬಂಧಿಸಿ, ಒಂಬತ್ತು ತಿಂಗಳ ಕಾಲ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನ್ಯಾಯಾಂಗ ಬಂಧನವಾಗಿತ್ತು

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.