7ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ನೌಕರರಿಗೆ ಮಹತ್ವದ ಮಾಹಿತಿ ನೀಡಿದ ರಾಜ್ಯಾಧ್ಯಕ್ಷರು – ಆಯೋಗದ ಜಾರಿ ಕುರಿತು ರಾಜ್ಯಾಧ್ಯಕ್ಷರು ಹೇಳಿದ್ದೇನು ನೋಡಿ…..

Suddi Sante Desk
7ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ನೌಕರರಿಗೆ ಮಹತ್ವದ ಮಾಹಿತಿ ನೀಡಿದ ರಾಜ್ಯಾಧ್ಯಕ್ಷರು – ಆಯೋಗದ ಜಾರಿ ಕುರಿತು ರಾಜ್ಯಾಧ್ಯಕ್ಷರು ಹೇಳಿದ್ದೇನು ನೋಡಿ…..

ಮಂಗಳೂರು

ಏಳನೇ ವೇತನ ಆಯೋಗದ ಶಿಫಾರಸುಗಳು ಜೂನ್‌ನಲ್ಲಿ ಜಾರಿಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಹಂಪನಕಟ್ಟೆಯ ಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ನವೀಕರಣಗೊಂಡ ಸಭಾಂಗಣ ಹಾಗೂ ಅಧ್ಯಕ್ಷರ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 22 ಸಾವಿರ ರಾಜ್ಯ ಸರ್ಕಾರಿ ನೌಕರರಿದ್ದು ಅವರ ಬೇಡಿಕೆಗಳ ಧ್ವನಿ ಎತ್ತಲು ಸಂಘ ವೇದಿಕೆಯಾಗಿದೆ.ಎಲ್ಲಾ ವರ್ಗ ಗಳಿಗೆ ಸೇರಿದ ನೌಕರರು ಒಂದು ಕುಟುಂಬದಂತೆ ಒಗ್ಗಟ್ಟಾಗಿದ್ದಾರೆ.ಹಳೆಯ ಪಿಂಚಣಿ ಯೋಜನೆ ಯನ್ನು ಶೀಘ್ರದಲ್ಲಿ ಪುನರಾರಂಭಿಸುವ ಬಗ್ಗೆ ಸರ್ಕಾರ ನಿರ್ಧರಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಕೆ. ಕೃಷ್ಣ ಮಾತನಾಡಿ ನಾನು ಅಧಿಕಾರಕ್ಕೆ ಬಂದ ನಂತರ ಸಂಘದಲ್ಲಿ ₹60ಲಕ್ಷ ಠೇವಣಿ ಇಟ್ಟಿದ್ದೇನೆ. ಸಂಘಕ್ಕೆ ತಿಂಗಳಿಗೆ ₹4.30 ಲಕ್ಷದವೆರೆಗೆ ಕಟ್ಟಡದ ಬಾಡಿಗೆ ಹಣ ಬರುತ್ತದೆ’ ಎಂದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಬಿ., ರಾಜ್ಯ ಖಜಾಂಜಿ ಸಿದ್ರಾಮಣ್ಣ, ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ರಾಜ್ಯ ಗೌರವಾಧ್ಯಕ್ಷ ವೆಂಕಟೇಶಯ್ಯ ಬಿ.ಎಚ್, ರಾಜ್ಯ ಹಿರಿಯ ಉಪಾಧ್ಯಕ್ಷರಾದ ರುದ್ರಪ್ಪ ಎಂ.ವಿ, ಎಸ್.ಬಸವರಾಜು, ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್, ರಾಜ್ಯ ಕಾರ್ಯದರ್ಶಿ ಸದಾನಂದ ನೆಲ್ಕುದ್ರಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಲಿಲ್ಲಿ ಪಾಯಸ್, ಜಿಲ್ಲಾ ಕಾರ್ಯದರ್ಶಿ ಗಣೇಶ್ ರಾವ್ ಎಚ್, ರಾಜ್ಯ ಪರಿಷತ್‌ ಸದಸ್ಯೆ ಶೆರ್ಲಿ ಸುಮಾಲಿನಿ, ಗೌರವ ಅಧ್ಯಕ್ಷ ಉದಯ ಕುಮಾರ್‌ ಇದ್ದರು.

ಸುದ್ದಿ ಸಂತೆ ನ್ಯೂಸ್ ಮಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.