ಚಿತ್ರದುರ್ಗ –
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳತನ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಹೌದು ಪಟ್ಟಣದ ಜಾಲಿ ನಿಂಗಪ್ಪ ಬಡಾವಣೆಯಲ್ಲಿ ಈ ಒಂದು ಕಳ್ಳತನ ನಡೆದಿದೆ. ಮನೆಯ ಬೀಗ ಮುರಿದು ಚಿನ್ನಾಭರಣ ದೋಚಿದ್ದಾರೆ ಕಳ್ಳರು.
ಅಶೋಕ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಒಂದು ಕಳ್ಳತನ ನಡೆದಿದೆ.ಮನೆಯ ಬೀರುವಿನ ಲಾಕ್ ಮುರಿದು 50 ಗ್ರಾಂ ಬಂಗಾರದ ಒಡವೆ ಕದ್ದು ಕಳ್ಳರು ಪರಾರಿಯಾಗಿ ದ್ದಾರೆ.ಅಂದಾಜು 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿದ್ದಾರೆ ಖತರ್ನಾಕ್ ಗ್ಯಾಂಗ್.ಇನ್ನೂ ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಬಡಾವಣೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ಮಾಡಿ ಪ್ರಕರಣವನ್ನು ದಾಖಲು ಮಾಡಿಕೊಂ ಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.