ಶಿಕ್ಷಕರ ಸಮುದಾಯಕ್ಕೆ ಮಾದರಿಯಾದ ಯಲ್ಲಪ್ಪ ಬಂಡಿ – ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಮಸ್ಯೆಗೆ ನೆರವಾದ ಮುಖ್ಯಶಿಕ್ಷಕ…..

Suddi Sante Desk
ಶಿಕ್ಷಕರ ಸಮುದಾಯಕ್ಕೆ ಮಾದರಿಯಾದ ಯಲ್ಲಪ್ಪ ಬಂಡಿ – ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಮಸ್ಯೆಗೆ ನೆರವಾದ ಮುಖ್ಯಶಿಕ್ಷಕ…..

ಅಳವಂಡಿ

ಮುಖ್ಯಶಿಕ್ಷಕ ರೊಬ್ಬರು ಸರ್ಕಾರ ಶಾಲೆಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಲು ಮುಂದಾಗಿದ್ದಾರೆ ಹೌದು ಕೊಪ್ಪಳ ಜಿಲ್ಲೆಯ ಮುದುಕನಗೌಡ ಗಾಳಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಮುಖ್ಯ ಶಿಕ್ಷಕ ₹1 ಲಕ್ಷ ರೂಪಾಯಿ ದೇಣಿಗೆ ನೀಡಲು ಮುಂದಾಗಿದ್ದಾರೆ

ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.ಇಲ್ಲಿನ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದು ರಾಗಿತ್ತು ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಬೇಕು ಎಂಬ ಉದ್ದೇಶದಿಂದ ಈ ಶಾಲೆಗೆ ನೂತನವಾಗಿ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿದ ಯಲ್ಲಪ್ಪ ಬಂಡಿ ಅವರು ತಮ್ಮ ತಂದೆಯ ಸ್ಮರಣಾರ್ಥ ಸುಮಾರು ₹1 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ನೀರಿನ ವ್ಯವಸ್ಥೆ ಮಾಡುವ ಮೂಲಕ ಶಿಕ್ಷಕರ ವರ್ಗಕ್ಕೆ ಮಾದರಿಯಾಗಿದ್ದಾರೆ.

ಯಲ್ಲಪ್ಪ ಬಂಡಿ ಅವರು ಕೊಪ್ಪಳ ತಾಲ್ಲೂಕಿನ ನೀರಲಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಂಗ್ಲ ಭಾಷೆಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದೆ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿ ಅಳವಂಡಿಯ ಸರ್ಕಾರಿ ಪ್ರೌಢಶಾಲೆಯನ್ನು ಆಯ್ಕೆ ಮಾಡಿಕೊಂಡು ಮುಖ್ಯ ಶಿಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಶಾಲೆಯಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುವ ವೇಳೆ ಈ ಘೋಷಣೆ ಮಾಡುವ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ದೇಣಿಗೆ ನೀಡಲು ಮುಂದಾಗಿದ್ದು ಎಲ್ಲ ಕಡೆ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

ಸುದ್ದಿ ಸಂತೆ ನ್ಯೂಸ್ ಅಳವಂಡಿ….ಮ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.