ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆಯ ಸಿಬ್ಬಂದಿ – 10 ಸಾವಿರ ರೂಪಾಯಿ ತಗೆದುಕೊಳ್ಳುವಾಗ ಟ್ರ್ಯಾಪ್…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆಯ ಸಿಬ್ಬಂದಿ – 10 ಸಾವಿರ ರೂಪಾಯಿ ತಗೆದುಕೊಳ್ಳುವಾಗ ಟ್ರ್ಯಾಪ್…..

ಶಿವಮೊಗ್ಗ

ಗುತ್ತಿಗೆದಾರರೊಬ್ಬರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ. ಮಹಾನಗರ ಪಾಲಿಕೆಯ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಎಸ್‌.ಆರ್‌.ಸಿದ್ದೇಶ್‌ ಬಲೆಗೆ ಬಿದ್ದ ಸಿಬ್ಬಂದಿ ಯಾಗಿದ್ದಾರೆ

ಸುನಿಲ್‌ ಕುಮಾರ್‌ ಎಂಬವರು ಮಹಾನಗರ ಪಾಲಿಕೆ ಆವರಣದ ಇಂಜಿನಿಯರ್‌ ಕಟ್ಟಡದ ಮೇಲ್ಭಾಗದಲ್ಲಿ ಶೆಡ್‌ ನಿರ್ಮಾಣಕ್ಕೆ ಗುತ್ತಿಗೆ ಪಡೆದಿದ್ದರು. 2024ರ ಡಿಸೆಂಬರ್‌ನಲ್ಲಿ ಶೆಡ್‌ ಪೂರ್ಣಗೊಂಡಿದ್ದು ಹಣ ಮಂಜೂರು ಮಾಡುವಂತೆ ಬಿಲ್‌ ಸಲ್ಲಿಸಿದ್ದರು. ಕಾಮಗಾರಿಯ ಒಟ್ಟು ಮೊತ್ತದಲ್ಲಿ 4 ಪರ್ಸೆಂಟ್‌ ಕಮಿಷನ್‌ ಹಣ ನೀಡಿದರೆ ಬಿಲ್‌ ಮಂಜೂರು ಮಾಡುವುದಾಗಿ ಸಾಮಾನ್ಯ ನಿಧಿ ಲೆಕ್ಕ ವಿಭಾಗದ ಕಚೇರಿ ವ್ಯವಸ್ಥಾಪಕ ಸಿದ್ದೇಶ್‌ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

11 ರೂ. ಹಣಕ್ಕೆ ಸಿದ್ದೇಶ್‌ ಬೇಡಿಕೆ ಇಟ್ಟಿದ್ದು 10 ಸಾವಿರ ರೂ. ಹಣ ಪಡೆಯುವ ಸಂದರ್ಭ ದಾಳಿ ನಡೆಸಿ ಬಂಧಿಸ ಲಾಗಿದೆ ಲೋಕಾಯುಕ್ತ ಎಸ್‌ಪಿ ಮಂಜುನಾಥ್‌ ಚೌಧರಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಸದ್ಯ ಸಿದ್ದೇಶ್ ನನ್ನು ವಶಕ್ಕೆ ಪಡೆದಂತಹ ಲೋಕಾಯುಕ್ತ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.