1ನೇ ತರಗತಿ ಪ್ರವೇಶಕ್ಕೆ ಹೊಸ ನಿಯಮಗಳು – ಆತಂಕವನ್ನು ತಂದಿಟ್ಟ ಇಲಾಖೆಯ ಸುತ್ತೋಲೆ…..

Suddi Sante Desk
1ನೇ ತರಗತಿ ಪ್ರವೇಶಕ್ಕೆ ಹೊಸ ನಿಯಮಗಳು – ಆತಂಕವನ್ನು ತಂದಿಟ್ಟ ಇಲಾಖೆಯ ಸುತ್ತೋಲೆ…..

ಬೆಂಗಳೂರು

1ನೇ ತರಗತಿ ಸೇರಲು ಹೊಸ ರೂಲ್ಸ್​ ಲಕ್ಷಾಂತರ ಮಕ್ಕಳು ಮನೆಯಲ್ಲೇ ಕೂರುವ ಭೀತಿ ಹೌದುಒಂದನೇ ತರಗತಿಗೆ ಶಾಲೆಗೆ ದಾಖಲಾತಿ ಪಡೆಯಲು ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆ ಈಗ ಪೋಷಕರ ನಿದ್ದೆಗೆಡಿಸಿದ್ದು, ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಬಗ್ಗೆ ಭಾರೀ ಅಸಮಾಧಾನ ಹೊರಹಾಕಿರುವ ಪೋಷಕರು, ಸರ್ಕಾರ ಈ ನಿಯಮ ಸಡಿಲಿಕೆ ಮಾಡಬೇಕು ಅಂತ ಆಗ್ರಹ ಮಾಡಿದ್ದಾರೆ.

ಈಗಾಗಲೇ ಲಕ್ಷಾಂತರ ಮಂದಿ ಮಕ್ಕಳು ಯುಕೆಜಿ ತೇರ್ಗಡೆ ಹೊಂದುತ್ತಿದ್ದು, 6 ವರ್ಷ ತುಂಬಲು 5,10 ದಿನಗಳಷ್ಟೇ ಬಾಕಿ ಇದೆ. ಸರ್ಕಾರದ ಈ ಸುತ್ತೋಲೆಗೆ ಪರಿಣಾಮ ಇವರೆಲ್ಲ ಒಂದನೇ ತರಗತಿಗೆ ಪ್ರವೇಶ ಸಿಗದೇ ಶೈಕ್ಷಣಿಕ ಸಮಯ ವ್ಯರ್ಥ ಮಾಡಿಕೊಳ್ಳುವ ಭೀತಿಯಲ್ಲಿ ಇದ್ದಾರೆ, ಹೀಗಾಗಿ ಸರ್ಕಾರ ಈ ನಿಯಮ ಇದೊಂದು ಬಾರಿ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕರಣ ನ್ಯಾಯಾಲಯ ಹಂತದಲ್ಲಿದೆ. ಪೋಷಕರು ಹಾಗೂ ಮಕ್ಕಳ ಮನವಿ ಬಗ್ಗೆ ನನಗೂ ಸಹಾನುಭೂತಿ ಇದೆ. ಮುಂದಿನ ದಿನಗಳಲ್ಲಿ ಕೋರ್ಟ್ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆ ಒಂದನೇ ತರಗತಿಗೆ ಪ್ರವೇಶ ಪಡೆದುಕೊಳ್ಳುವ ವಿಚಾರ ಪೋಷಕರು ಹಾಗೂ ಸರ್ಕಾರದ ನಡುವೆ ಹಗ್ಗಜಗ್ಗಾಟ ಮುಂದುವರೆಯಲಿದೆ. ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತೆ ಎನ್ನುವುದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.