ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ಲಾರಿ – ಲಾರಿ ನಿಲ್ಲಿಸದೇ ಪೊಲೀಸ್ ಪೇದೆ ಗೆ ಡಿಕ್ಕಿ ಸ್ಥಳದಲ್ಲೇ ಸಾವು…..

Suddi Sante Desk
ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ಲಾರಿ – ಲಾರಿ ನಿಲ್ಲಿಸದೇ ಪೊಲೀಸ್ ಪೇದೆ ಗೆ ಡಿಕ್ಕಿ ಸ್ಥಳದಲ್ಲೇ ಸಾವು…..

ದಾವಣಗೆರೆ

ವಾಹನಗಳ ತಪಾಸಣೆ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೇದೆಯೊಬ್ಬರು ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳು ಗ್ರಾಮದ ಟೋಲ್‌ಗೇಟ್ ಬಳಿ ನಡೆದಿದೆ .

ಬಾಗಲಕೋಟೆ ಜಿಲ್ಲೆಯ ಹಿಬ್ಬರಗಿ ಇಂಡಿ ಗ್ರಾಮದ ರಾಮಪ್ಪ ಪೂಜಾರಿ (33) ಸಾವನ್ನಪ್ಪಿದ ಪೊಲೀಸ್ ಪೇದೆ ಯಾಗಿದ್ದು ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿ ಸುತ್ತಿದ್ದ ರಾಮಪ್ಪ ಪೂಜಾರಿ ಅವರನ್ನು ಹೆಬ್ಬಾಳು ಟೋಲ್‌ಗೇಟ್ ಬಳಿ ಲೈನ್‌ಡಿಸಿಪ್ಲಿನ್ ಡ್ಯೂಟಿಗೆ ನಿಯೋಜಿಸಲಾಗಿತ್ತು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ ಬರುತ್ತಿದ್ದ ಲಾರಿ ಎದುರಿಗೆ ನಿಲ್ಲಿಸಲು ಸೂಚನೆ ನೀಡಿದರು.

ಆದರೆ, ಚಾಲಕ ಲಾರಿ ನಿಲ್ಲಿಸದೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಾಮಪ್ಪ ಪೂಜಾರಿ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ರಾಮಪ್ಪ ಪೂಜಾರಿ ಮಗುವಿನ ಮೊದಲ ವರ್ಷದ ಜನ್ಮದಿನ ಆಚರಣೆ ಮಾಡಿದ್ದರು. ಒಂದು ವರ್ಷದ ಮಗು, ಪತ್ನಿ, ತಂದೆ ಮತ್ತು ತಾಯಿ, ಅಪಾರ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗ್ರಾಮಾಂ ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಸಂತೆ ನ್ಯೂಸ್ ದಾವಣಗೆರೆ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.