ನಿವೃತ್ತ ಶಿಕ್ಷಕ ಭೀಕರ ಹತ್ಯೆ – ಕನಸಿನ ಮನೆ ಗಾಗಿ ಬ್ಯಾಂಕ್ ನಿಂದ ಹಣ ತಗೆದುಕೊಂಡು ಹೊರಟಿದ್ದ ನಿವೃತ್ತ ಶಿಕ್ಷಕ…..

Suddi Sante Desk
ನಿವೃತ್ತ ಶಿಕ್ಷಕ ಭೀಕರ ಹತ್ಯೆ – ಕನಸಿನ ಮನೆ ಗಾಗಿ ಬ್ಯಾಂಕ್ ನಿಂದ ಹಣ ತಗೆದುಕೊಂಡು ಹೊರಟಿದ್ದ ನಿವೃತ್ತ ಶಿಕ್ಷಕ…..

ಬೆಂಗಳೂರು

ನಿವೃತ್ತ ಮೇಷ್ಟ್ರು ರೊಬ್ಬರನ್ನು ಬರ್ಬರ ವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಹೌದು ಸುದೀರ್ಘ ಸೇವೆಯ ಬಳಿಕ ನಿವೃತ್ತಿಯಾಗಿದ್ದ ಶಿಕ್ಷಕ ರೊಬ್ಬರು ಕನಸಿನ ಮನೆ ಕಟ್ಟಲು ಹಣ ಡ್ರಾ ಮಾಡಿ ಕೊಂಡು ಬರುವಾಗ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಿವೃತ್ತ ಶಿಕ್ಷಕ ಹನುಮಂತರಾಯಪ್ಪ ಅವರನ್ನು ಹೊಡೆದು ಕೊಲೆ ಮಾಡಿ ಅವರ ಬಳಿ ಇದ್ದ ಮೂರು ಲಕ್ಷ ರೂ. ಹಣ ದೊಂದಿಗೆ ಪರಾರಿಯಾಗಿದ್ದಾರೆ.

ಹನುಮಂತರಾಯಪ್ಪ ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯಿಂದ ಬಂದಿದ್ದ ಹಣ. ವನ್ನು ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿಯ ಕೆನರಾ ಬ್ಯಾಂಕ್​ನಿಂದ ಡ್ರಾ ಮಾಡಿಕೊಂಡು ಬರುತ್ತಿರು ವಾಗ ದುಷ್ಕರ್ಮಿಗಳು ಅಡ್ಡಹಾಕಿ ದೊಣ್ಣೆಯಿಂದ ಹೊಡೆದ ಕೊಂದು ಹಣ ಸಮೇತ ಎಸ್ಕೇಪ್ ಆಗಿದ್ದಾರೆ.

ಮನೆಯನ್ನು ಕಟ್ಟಿಸುತ್ತಿದ್ದ ಶಿಕ್ಷಕ ಸುಮಾರು ಮೂರು ಲಕ್ಷ ರೂ. ಹಣ ಡ್ರಾ ಮಾಡಿಕೊಂಡು ಒಂದಷ್ಟು ವಸ್ತುಗಳನ್ನು ಖರೀದಿಸಿ ಹೊರಟ್ಟಿದ್ದರು.ದುರಾದೃಷ್ಟವಶಾತ್ ಬ್ಯಾಂಕ್ ನಿಂದ ಹಿಂಬಾಲಿಸಿಕೊಂಡು ಬಂದ ಅಪರಿಚಿತ ಖದೀಮ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ ಬಳಿಕ ಬೈಕ್ ನಿಂದ ಕೆಳಗೆ ಬೀಳುತ್ತಿದ್ದಂತೆ ದೊಣ್ಣೆಯಿಂದ ಮುಖಕ್ಕೆ ಹೊಡೆದು ಕೊಲೆ ಮಾಡಿ ಹಣ ಎಗರಿಸಿ ಪರಾರಿಯಾಗಿದ್ದಾರೆ

ಮೃತ ಹನುಮಂತರಾಯಪ್ಪರ ಏಕೈಕ ಪುತ್ರಿ ಹೇಮಲತಾಗೆ ಅಂತಾನೇ ತಮ್ಮ ನಿವೃತ್ತಿಯಿಂದ ಬಂದಿದ್ದ ಹಣದಲ್ಲಿ ಮನೆ ಕಟ್ಟಿಸಿ ಕೊಡುತ್ತಿದ್ದರು. ದೊಡ್ಡ ಬಳ್ಳಾಪುರದ ಕುರುಬರಹಳ್ಳಿಯಲ್ಲಿ ಮನೆ ಕಟ್ಟಲು ಪಾಯ ಹಾಕಲಾಗಿತ್ತು ಆದ್ರೆ, ತ್ಯಾಮಗೊಂಡ್ಲು ಕೆನರಾ ಬ್ಯಾಂಕ್ ನಲ್ಲಿ ಹಣ ತಗೊಂಡು ಮನೆಗೆ ಬೇಕಾದ ರೇಷನ್, ಗ್ಯಾಸ್ ತಗೊಂಡು ಟಿವಿಎಸ್ ಮೊಪಡೆನಲ್ಲಿ ಬರುವಾಗ ದುಷ್ಕರ್ಮಿ ದೊಣ್ಣೆಯಿಂದ ಹೊಡೆದು ಕೊಂದಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ತ್ಯಾಮಗೊಂಡ್ಲು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದರು. ಬಳಿಕ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತ ದೇಹವನ್ನು ಹಸ್ತಾಂತರ ರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.