ಶಿಕ್ಷಕ ಮಹ್ಮದ ರಫೀಕ ಅಮಾನತು – ಒತ್ತಡದ ನಡುವೆ ಕೆಲಸ ಮಾಡುತ್ತಿರುವ ಶಿಕ್ಷಕರ ಮೇಲೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಅಮಾನತು ಶಿಕ್ಷೆ…..

Suddi Sante Desk
ಶಿಕ್ಷಕ ಮಹ್ಮದ ರಫೀಕ ಅಮಾನತು – ಒತ್ತಡದ ನಡುವೆ ಕೆಲಸ ಮಾಡುತ್ತಿರುವ ಶಿಕ್ಷಕರ ಮೇಲೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಅಮಾನತು ಶಿಕ್ಷೆ…..

ಸೇಡಂ

ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಕಾರ್ಯದಲ್ಲಿ ಕರ್ತವ್ಯ ಲೋಪವೆಸಗಿರುವ ಕಾರಣಕ್ಕಾಗಿ ತಾಲ್ಲೂಕಿನ ಹೂಡಾ (ಎಂ) ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮಹ್ಮದ ರಫೀಕ ಅವರನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ ಆದೇಶಿಸಿದ್ದಾರೆ.

ಸದರಿ ಶಿಕ್ಷಕನನ್ನು ಸೋಮಪಲ್ಲಿ ಗ್ರಾಮಕ್ಕೆ ಸಮೀಕ್ಷೆ ಕೆಲಸಕ್ಕೆ ನಿಯೋಜಿಸಲಾಗತ್ತು, ಆದರೆ ಅವರು ವಹಿಸಿದ ಕೆಲಸದಲ್ಲಿ ಆಸಕ್ತಿ ತೋರದೆ, ಕಳೆದ ನಾಲ್ಕೆದು ದಿನಗ ಳಿಂದ ಗೈರಾಗಿದ್ದರು. ಮೇಲಧಿಕಾರಿಗಳು ಕರೆ ಮಾಡಿ ತಿಳಿಸಿದ ಮೇಲೂ ಸ್ಪಂದಿಸದೆ ಇರುವದರಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಸೇಡಂ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.