ಇನ್ಸ್ಪೆಕ್ಟರ್ ಬಸವರಾಜ ಅಮಾನತು –  ಅಮಾನತು ಆದೇಶ ಮಾಡಿದ ಐಜಿಪಿ…..

Suddi Sante Desk
ಇನ್ಸ್ಪೆಕ್ಟರ್ ಬಸವರಾಜ ಅಮಾನತು –  ಅಮಾನತು ಆದೇಶ ಮಾಡಿದ ಐಜಿಪಿ…..

ಹಾವೇರಿ

ಇನ್ಸ್ಪೆಕ್ಟರ್ ಬಸವರಾಜ ಅಮಾನತು –  ಅಮಾನತು ಆದೇಶ ಮಾಡಿದ ಐಜಿಪಿ ಹೌದು ಮಹಿಳಾ ಸಹೋದ್ಯೋಗಿಯೊಬ್ಬರಿಗೆ ಅಸಭ್ಯ ಸಂದೇಶ ಕಳುಹಿಸಿ ಕರ್ತವ್ಯ ಲೋಪ ಎಸಗಿದ್ದಾರೆ’ ಎಂಬ ಆರೋಪದಡಿ ಹಿರೇಕೆರೂರು ಸರ್ಕಲ್ ಇನ್‌ಸ್ಪೆಕ್ಟರ್ ಬಸವರಾಜ್ ಪಿ.ಎಸ್. ಅವರನ್ನು ಸೇವೆಯಿಂದ ಅಮಾನತುಗೊಳಿ ಸಲಾಗಿದೆ.

ಕೃತ್ಯಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ತನಿಖೆ ನಡೆಸಿದ್ದ ಹೆಚ್ಚುವರಿ ಎಸ್‌ಪಿ ಲಕ್ಷ್ಮಣ ಶಿರಕೋಳ ಅವರು ನೀಡಿದ್ದ ವರದಿ ಆಧರಿಸಿ ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರು ಇನ್‌ಸ್ಪೆಕ್ಟರ್ ಬಸವರಾಜ್ ಅವರನ್ನು ಅಮಾನತುಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆಗೂ ಸೂಚಿಸಿದ್ದಾರೆ.

‘ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಹೋದ್ಯೋಗಿಯೊಬ್ಬರಿಗೆ ಸಂಬಂಧಪಟ್ಟಂತೆ ಅಸಭ್ಯ ಸಂದೇಶ ಕಳುಹಿಸಿದ್ದರೆಂಬ ಆರೋಪ ಬಂದಿತ್ತು. ಪ್ರಾಥಮಿಕ ತನಿಖೆ ವರದಿ ಪಡೆದು ಇನ್‌ಸ್ಪೆಕ್ಟರ್ ಬಸವರಾಜ್‌ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಹಾವೇರಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.