This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ನಮ್ಮ ಸರ್ಕಾರಿ ಶಾಲಾ ಶಿಕ್ಷಕರಿಗೆ ಇದಕ್ಕಿಂತ ದೊಡ್ಡ ಪ್ರಶಸ್ತಿ ಬೇಕಾ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಮಕ್ಕಳ ಈ ಪ್ರೀತಿಯ ಚಿತ್ರಣ…..

WhatsApp Group Join Now
Telegram Group Join Now

ಅಳವಂಡಿ –

ಸಾಮಾನ್ಯವಾಗಿ ಯಾರಾದರೂ ಶಿಕ್ಷಕರು ವರ್ಗಾವಣೆ ಗೊಂಡರೆ ಅವರನ್ನು ಪ್ರೀತಿ ಯಿಂದ ಸನ್ಮಾನಿಸಿ ಗೌರವಿಸೊ ದು ಸಾಮಾನ್ಯ ಆದರೆ ಇಲ್ಲೊಂದು ಶಾಲೆಯಲ್ಲಿ ವರ್ಗಾವಣೆ ಗೊಂಡ ಶಿಕ್ಷಕನನ್ನು ಶಾಲೆಯಿಂದ ಬಿಟ್ಟು ಕಳಿಸಿಕೊಡದೇ ಮುತ್ತಿಗೆ ಹಾಕಿ ಕಣ್ಣೀರಾಕಿದ ಘಟನೆ ಕೊಪ್ಪಳ ದಲ್ಲಿ ಕಂಡು ಬಂದಿದೆ.ನಿಲೋಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆ ಶಿಕ್ಷಕ ವೀರಯ್ಯ ಅವರು ವರ್ಗಾವಣೆಗೊಂಡ ಕಾರಣ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರು ಹಾಕಿದರು.

12 ವರ್ಷಗಳಿಂದ ಗಣಿತ ವಿಜ್ಞಾನ ಶಿಕ್ಷಕರಾಗಿ ಈ ಶಾಲೆ ಯಲ್ಲಿ ಸೇವೆ ಸಲ್ಲಿಸಿದ್ದ ವೀರಯ್ಯ ಎಚ್.ಎಂ ಅವರು ಯಲಬುರ್ಗಾ ತಾಲ್ಲೂಕಿನ ವಟಪರವಿ ಗ್ರಾಮಕ್ಕೆ ವರ್ಗಾ ವಣೆ ಆಗಿದ್ದಾರೆ ನೀವು ಚೆನ್ನಾಗಿ ಪಾಠ ಮಾಡುತ್ತೀರಿ ಇನ್ನೂ ನಿಮ್ಮ ಪಾಠ ಕೇಳಬೇಕು.ದಯವಿಟ್ಟು ನೀವು ಹೋಗಬೇಡಿ, ಇಲ್ಲೇ ಇರಿ ಎಂದು ವಿದ್ಯಾರ್ಥಿಗಳು ಶಿಕ್ಷಕ ವೀರಯ್ಯ ಅವರ ಬಳಿ ಕಣ್ಣೀರು ಹಾಕುತ್ತಾ ಮನವಿ ಮಾಡುಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.ವಿದ್ಯಾರ್ಥಿಗಳು ಬಿಕ್ಕಿ ಬಿಕ್ಕಿ ಅಳುತ್ತಳೇ ವರ್ಗಾವಣೆಯಾಗಿರುವ ಶಿಕ್ಷಕನ ಕಾಲಿಗೆ ಬಿದ್ದು ಆಶೀ ರ್ವಾದ ಪಡೆದರು‌.ಶಾಲೆಯ ಸಹ ಶಿಕ್ಷಕರೂ ನೆಚ್ಚಿನ ಶಿಕ್ಷಕರು ವರ್ಗಾವಣೆಯಾಗಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತರು.ಈ ಪ್ರೀತಿಯ ಕಂಡು ವೀರಯ್ಯರವರು ಕೂಡ ಭಾವುಕರಾಗಿ ಕಣ್ಣೀರು ಸುರಿಸಿದರು.ಈ ಪರಿಯ ಪ್ರೀತಿ ಕೊಟ್ಟ ಶಾಲೆಗೆ ಪ್ರೀತಿಯ ಧನ್ಯವಾದ ತಿಳಿಸಿದರು.ವರ್ಗಾವಣೆಗೊಂಡ ಶಿಕ್ಷಕ ವೀರಯ್ಯ ಅವರು ಮಾತನಾಡಿ ಇಲ್ಲಿ ಪ್ರೀತಿ ನನ್ನನ್ನು ಕಟ್ಟಿ ಹಾಕಿದೆ.ಕಣ್ಣೀರು ತಡೆಗೋಡೆಯಂತೆ ನಿಂತಿದೆ ಅಭಿಮಾನ ಅಡ್ಡಲಾಗಿ ನಿಂತಿದೆ ಬಿಟ್ಟು ಹೋಗಲು ಆಗುತ್ತಿಲ್ಲ ಕಂಬನಿ ನೋಡೋಕೆ ಆಗುತ್ತಿಲ್ಲ ಎಂದು ಮಕ್ಕಳ ಅಕ್ಕರೆಯ ಆಕ್ರಂ ದನದಲ್ಲಿ ಸಿಹಿ ಸಂಕಟದಲ್ಲಿ ಬಿಕ್ಕುತ್ತಾ ಹೆಜ್ಜೆ ಹಾಕಿದರು.


Google News

 

 

WhatsApp Group Join Now
Telegram Group Join Now
Suddi Sante Desk