ಪಣಜಿ –
ಹಲವು ರಾಜ್ಯಗಳಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಆತಂಕ ಮನೆ ಮಾಡಿದ್ದು, ಮಹಾಮಾರಿಯ ಮೂರನೇ ಅಲೆ ಭಯ ಶುರುವಾಗಿದೆ. ಹೀಗಾಗಿ ಹಲವು ರಾಜ್ಯಗಳಲ್ಲಿ ಹಲವು ರೀತಿಯ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಸದ್ಯ ಗೋವಾ ದಲ್ಲಿ ಕೂಡ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಇಂದಿ ನಿಂದ ಜನವರಿ 26ರ ವರೆಗೂ 8 ಹಾಗೂ 9ನೇ ತರಗತಿ ಯವರೆಗಿನ ಶಾಲೆಗಳನ್ನು ಮುಚ್ಚಲಾಗಿದೆ.
ಹೌದು ಶಾಲಾ ಕಾಲೇಜುಗಳನ್ನು ಕೂಡ ಮುಚ್ಚಲು ಆದೇಶ ಮಾಡಲಾಗಿದೆ.ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಪ್ರಮೋದ್ ಸಾವಂತ್ ಟಾಸ್ಕ್ ಪೋರ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ ಶಾಲೆ ಬಂದ್ ಮಾಡುವ ಕುರಿತು ಹೇಳಿದ್ದಾರೆ.ಅಲ್ಲದೇ ರಾತ್ರಿ ಹೊತ್ತು ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಕೂಡ ಹೇಳಿದ್ದಾರೆ.ಗೋವಾ ರಾಜ್ಯದಲ್ಲಿ ಭಾನುವಾರ 388 ಜನರ ಲ್ಲಿ ಸೋಂಕು ಕಾಣಿಸಿಕೊಂಡಿದ್ದು ಓರ್ವ ವ್ಯಕ್ತಿ ಮಹಾ ಮಾರಿಗೆ ಬಲಿಯಾಗಿದ್ದಾರೆ.ಅಲ್ಲಿನ ಪಾಸಿಟಿವಿಟಿ ದರ ಶೇ. 5 ರಷ್ಟಿದ್ದು ರಾತ್ರಿ 11 ರಿಂದ ಬೆಳಿಗ್ಗೆ 6ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗುವುದು ಎಂದು ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯ ಶೇಖರ್ ಸಲ್ಕಾರ್ ಹೇಳಿದರು.