This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ರಸ್ತೆಯಲ್ಲಿ ಸಿಕ್ಕ 10 ಸಾವಿರ ₹ ಮರಳಿಸಿದ ವಿದ್ಯಾರ್ಥಿನಿಯರು ವಿದ್ಯಾರ್ಥಿನಿಯರ ಕಾರ್ಯವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಶಿಕ್ಷಣ ಸಚಿವರಿಂದ ಪ್ರಶಂಸೆ…..

WhatsApp Group Join Now
Telegram Group Join Now

ಬಸ್ರೂರು –

ಸಾಮಾನ್ಯವಾಗಿ ಯಾರಿಗಾದರೂ ಹಣ ಸಿಕ್ಕರೆ ಸಿಕ್ಕ ಹಣವನ್ನು ಯಾಕೆ ಇನ್ನೊಬ್ಬರಿಗೆ ಕೊಡಬೇಕು ಎನ್ನದೇ ತಾವೇ ಇಟ್ಟುಕೊಳ್ಳುತ್ತಾರೆ ಆದರೆ ಮೂವರು ವಿದ್ಯಾರ್ಥಿ ನಿಯರಿಗೆ ಹತ್ತು ಸಾವಿರ ರೂಪಾಯಿ ಸಿಕ್ಕರು ತಾವೇ ಇಟ್ಟುಕೊಳ್ಳದೇ ಕಳೆದಕೊಂಡವರಿಗೆ ಮರಳಿಸಿದ್ದಾರೆ

ಹೌದು ಕುಂದಾಪೂರ ತಾಲ್ಲೂಕಿನ ಬಸ್ರೂರಿನ ಕೋಣಿ ಸರ್ಕಾರಿ ಪ್ರೌಢಶಾಲೆಯ ಸಮೀಪ ರಸ್ತೆಯಲ್ಲಿ ವಿದ್ಯಾರ್ಥಿ ನಿಯರಿಗೆ ಹತ್ತು ಸಾವಿರ ರೂಪಾಯಿ ಹಣ ಸಿಕ್ಕಿದೆ ಪ್ರೌಢ ಶಾಲಾ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯ ಜೆ., ಪ್ರಸ್ತುತಿ ಮತ್ತು ವೈಷ್ಣವಿ ಅವರಿಗೆ ಈ ಒಂದು ಹಣ ಸಿಕ್ಕಿದೆ ಕೂಡಲೇ ಅವರು ಹಣ ಕಳೆದುಕೊಂಡವರನ್ನು ಪತ್ತೆ ಮಾಡಿ ಸುಲೇಖಾ ಅವರಿಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಮುಖ್ಯೋಪಾಧ್ಯಾಯ ವಿದ್ವಾನ್‌ ಮಾಧವ ಅಡಿಗ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.ಹಣ ಕಳೆದುಕೊಂಡ ಸುಲೇಖಾ ಅವರು ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೂ ಸಿಹಿತಿಂಡಿ ಕೊಟ್ಟು ಕೃತಜ್ಞತೆ ಅರ್ಪಿಸಿದ್ದಾರೆ.ಶಿಕ್ಷಣ ಸಚಿವರ ಪ್ರಶಂಸೆ ಶಾಲೆಗಳು ಮಕ್ಕಳಿಗೆ ಶಿಕ್ಷಣದ ಜತೆಗೆ ಜೀವನದ ಮೌಲ್ಯಗಳನ್ನು ತಿಳಿಸಿಕೊಡುವ ಕೇಂದ್ರಗಳು ಆಗಬೇಕು. ತಮಗೆ ದಾರಿಯಲ್ಲಿ ದೊರೆತ ಹಣವನ್ನು ಮಾಲಕರಿಗೆ ಹಿಂದಿ ರುಗಿಸಿದ ಕುಂದಾಪುರ ತಾಲೂಕಿನ ಸರಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಶ್ರಾವ್ಯಾ, ಐಶ್ವರ್ಯ ಜೆ., ಪ್ರಸ್ತುತಿ ಮತ್ತು ವೈಷ್ಣವಿ ಅವರ ಪ್ರಾಮಾಣಿಕತೆ ಪ್ರಶಂಸನೀಯ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಟ್ವೀಟರ್‌ನಲ್ಲಿ ಅಭಿನಂದಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk