ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಯೋಜನೆಯ Update ಮಾಹಿತಿ ಇಲ್ಲಿದೆ…..

Suddi Sante Desk
ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ಯೋಜನೆಯ Update ಮಾಹಿತಿ ಇಲ್ಲಿದೆ…..

ಬೆಂಗಳೂರು

ಆರೋಗ್ಯ ಸಂಜೀವಿನಿ ಯೋಜನೆ ಕುರಿತಂತೆ ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ಮಹತ್ವದ ಪ್ರಕಟಣೆಯೊಂದನ್ನು ನೀಡಲಾಗಿದೆ ಹೌದು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಬರುವ ಕುಂದು ಕೊರತೆಗಳ ಬಗ್ಗೆ ವಿಚಾರಿಸಲು ಸಂಪರ್ಕಿಸುವ ಕುರಿತು ಸುವರ್ಣ ಆರೋಗ್ಯ ಟ್ರಸ್ಟ್ ಮಹತ್ವದ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಂಬಂಧಪಟ್ಟಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ದೂರವಾಣಿ ಸಂಖ್ಯೆ 9480819732 ಗೆ ಸರ್ಕಾರಿ ನೌಕರರು ಮತ್ತು ಅವಲಂಭಿತರು ಕರೆಮಾಡುತ್ತಿದ್ದು, ಸದರಿ ಸಂಖ್ಯೆಯು ನೋಂದಾಯಿತ ಆಸ್ಪತ್ರೆ ಇದೆಗಳಿಂದ ತುರ್ತು ರೋಗಿಗಳಿಗೆ ಚಿಕಿತ್ಸೆಗೂ ಮುನ್ನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಅನುಮತಿ ಪಡೆಯಲು ಮಾತ್ರ ಕರೆಮಾಡಲು ಸಿಮೀತವಾಗಿರುತ್ತದೆ.ಆದ್ದರಿಂದ ಸದರಿ ದೂರವಾಣಿ ಸಂಖ್ಯೆ 9480819732ಗೆ ಫಲಾನುಭವಿಗಳು ಕರೆಮಾಡದಂತೆ ತಿಳಿಸಿದೆ.

ಕರ್ನಾಟಕ ಸರ್ಕಾರಿ ನೌಕರರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಹಾಯವಾಣಿ : ಕರೆ ಮಾಡಲು 1800-425-8330 (24/7) ಹಾಗೂ What’s up : 9480819777 ಸಂದೇಶ/ದೂರುಗಳನ್ನು ದಾಖಲಿಸಲು ಕೋರಿದೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು,

ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿ ದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.ಮಾಸಿಕ ವಂತಿಕೆ ಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.18 ರೊಳಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು.

ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು.ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಗೆ ರಾಜ್ಯ ಸಕಾರದ ಎಲ್ಲಾ ಅಧಿಕಾರಿ/ನೌಕರರು ನೋಂದಣಿ ಮಾಡಿಕೊಳ್ಳಲು ಕ್ರಮವಹಿಸುವುದು.

ಸರ್ಕಾರಿ ನೌಕರನ ಹಾಗು ಕುಟುಂಬದ ಅರ್ಹ ಸದಸ್ಯರ ಭಾವಚಿತ್ರಗಳು( ಪ್ರತಿಯೊಬ್ಬರ ಭಾವ ಚಿತ್ರವನ್ನು ಪ್ರತ್ಯೇಕವಾಗಿ ನೀಡತಕ್ಕದ್ದು, ಭಾವ ಚಿತ್ರದ ಮೇಲೆ ಸರ್ಕಾರಿ ನೌಕರ ತನ್ನ ಸಹಿ ಮತ್ತು ದಿನಾಂಕವನ್ನು ನಮೂದಿಸುವುದು ಮತ್ತು ಪ್ರತಿ ಐದು ವರ್ಷಗಳಿಗೆ ಒಮ್ಮೆ ಹೊಸ ಭಾವ ಚಿತ್ರವನ್ನು ಒದಗಿಸತಕ್ಕದ್ದು)

ಸುದ್ದಿ ಸಂತೆ ನ್ಯೂಸ್ ಬೆಂಗಳೂರು….

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.